ಬೆಂಗಳೂರು: ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ. ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ ನಲ್ಲಿ ಮೂವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಯಶೋಧಾ (71), ಸುಮನ್ (41) ಹಾಗೂ ನರೇಶ್ ಗುಪ್ತಾ (34) ಆತ್ಮಹತ್ಯೆಗೆ ಶರಣಾದರು. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಅಲ್ಲದೇ, ಆತ್ಮಹತ್ಯೆಗೆ ಕಾರಣ ನಿಗೂಢ ಆಗಿದೆ. ಹೆಚ್ಚಿನ ಮಾಹಿತಿ ಪೊಲೀಸ ತನಿಖೆ ಬಳಿಕ ತಿಳಿದು ಬರಬೇಕಿದೆ. ತನಿಖೆ ಮುಂದುವರಿದಿದೆ.