ವಿಜಯಪುರ: ಬಾವಿಯಲ್ಲಿ ಕಾಲು ಜಾರಿ ಬಿದ್ದು ವೃದ್ದೆ ಅಸುನೀಗಿರುವ ಘಟನೆ
ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಬಿದರಕುಂದಿ ಗ್ರಾಮದಲ್ಲಿ ನಡೆದಿದೆ.
80 ವರ್ಷದ ಶಾಂತಮ್ಮ ಹಡಪದ (80) ಸಾವಿಗೀಡಾದ ವೃದ್ಧೆ. ಇನ್ನು ಮನೆ ಮುಂದೆ ತೊಟದಲ್ಲಿ ಬಯಲು ಬಹಿರ್ದೆಸೆಗೆ ಹೋದಾಗ ಬಾವಿಯಲ್ಲಿ ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮುದ್ದೇಬಿಹಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.