ಮೈಸೂರು: ದಸರಾ ಆನೆ ಬಲರಾಮನಿಗೆ ಗುಂಡೇಟು ಹೊಡೆದವನ್ನು ಪೊಲೀಸರು ಬಂಧಿಸಿದ್ದಾರೆ. ಕಳೆದ 14 ಬಾರಿ ಚಿನ್ನದ ಅಂಬಾರಿ ಹೊತ್ತಿದ್ದ ಬಲರಾಮನಿಗೆ ಜಮೀನಿನ ಮಾಲೀಕ ಸುರೇಶ್ ಎಂಬಾತನಿಂದ ಗುಂಡು ಹೊಡೆದಿದ್ದನು. ಅದಕ್ಕಾಗಿ ಅರಣ್ಯ ಇಲಾಖೆ ಅಧಿಕಾರಿಗಳು ಆರೋಪಿಯನ್ನು ವಶಕ್ಕೆ ಪಡೆದುಕೊಂಡು ಕಾನೂನು ಕ್ರಮ ಕೈಗೊಂಡಿದ್ದಾರೆ.
ಘಟನೆ ವಿವರ: ಮೈಸೂರಿನ ಪಿರಿಯಾಪಟ್ಟಣ ತಾಲ್ಲೂಕಿನ ಭೀಮನಕಟ್ಟೆ ಸಾಕಾನೆ ಶಿಬಿರದ ಆನೆ ಸಮೀಪದ ಜಮೀನಿಗೆ ಬಲರಾಮ ಹೋಗಿದ್ದಾನೆ. ಈ ವೇಳೆ ಸಿಟ್ಟಿಗೆದ್ದ ಮಾಲೀಕ ಸುರೇಶ್ ಗುಂಡು ಹಾರಿಸಿದ್ದಾನೆ. ಇದರಿಂದ ಆನೆಯ ತೊಡೆ ಬಳಿ ಗುಂಡು ಹೊಕ್ಕಿತ್ತು. ಅದಕ್ಕಾಗಿ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಪಶುವೈದ್ಯಾಧಿಕಾರಿ ಡಾ.ರಮೇಶ್ರಿಂದ ಚಿಕಿತ್ಸೆ ನೀಡಿದ್ದು, ಸದ್ಯ ಬಲರಾಮ ಚೇತರಿಸಿಕೊಂಡಿದ್ದಾನೆ. ಅಲ್ಲದೇ, ವನ್ಯ ಜೀವಿ ಕಾಯ್ದೆ ಉಲ್ಲಂಘನೆ ಆರೋಪದಲ್ಲಿ ಆರೋಪಿ ಬಂಧಿಸಿ ಸಿಂಗಲ್ ಬ್ಯಾರಲ್ ಬಂದೂಕು, ಕಾರ್ಟ್ರಿಜ್ ವಶಕ್ಕೆ ಪಡೆದುಕೊಂಡಿದ್ದಾರೆ. ಆರೋಪಿಗೆ 14 ದಿನಗಳ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.