ವಿಜಯಪುರ: ಪ್ರಜಾತಂತ್ರದಲ್ಲಿ ಎಲ್ಲರಿಗೂ ಹೋರಾಟ ಮಾಡುವ ಆಧಿಕಾರವಿದೆ. ಹೋರಾಟ ಮಾಡಲಿ ಎಂದು ವಿಜಯಪುರದಲ್ಲಿ ನಡೆದ ವಲಯ ಕಚೇರಿ ಉದ್ಘಾಟಿಸಿ ನಂತರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.
ಮಾಜಿ ಸಿದ್ದರಾಮಯ್ಯ ಮೇಲೆ ಮೊಟ್ಟೆ ಎಸೆದ ವಿಚಾರದಲ್ಲಿ ಕೊಡಗು ಚಲೋ ಬದಲಾಗಿ ರಾಜಧಾನಿಯಲ್ಲಿ ಕೈ ಹೋರಾಟ ಹಮ್ಮಿಕೊಂಡಿದ್ದು, ಮಾಜಿ ಸಿಎಂ ಸಿದ್ದರಾಮಯ್ಯ ನಮ್ಮ ರಾಜ್ಯದ ಹಿರಿಯ ನಾಯಕರು. ಒಂದು ಕೋಮಿನ ಪರವಾಗಿ ಸಿದ್ದರಾಮಯ್ಯ ಮಾತನಾಡಬೇಡಿ ಎಂದು ಮನವಿ ಮಾಡಿದರು. ಹಿಂದೂ ಮುಸ್ಲಿಂ, ಕ್ರಿಶ್ಚಿಯನ್ ಹೀಗೆ ಎಲ್ಲರೂ ನಿಮಗೆ ಮತ ಹಾಕಿದ್ದಾರೆ. ಯಾವುದೇ ಸಮುದಾಯಕ್ಕೆ ನೋವಾಗುವಂತೆ ಮಾತನಾಡಬೇಡಿ ಎಂದರು.
ಮುಂದೆ ಯಾರನ್ನು ಸಿಎಂ ಮಾಡಬೇಕೆಂಬುದು ಜನರ ಕೈಯಲ್ಲಿದೆ. ನಮ್ಮ ಕೈ, ಸಿದ್ದರಾಮಯ್ಯ ಕೈ, ಹಾಗೂ ಯಾರ ಕೈಯ್ಯಲ್ಲೂ ಇಲ್ಲ ಎಂದರು.
ಕೊಡಗಿನಲ್ಲಿ ಕಾಂಗ್ರೆಸ್ ಪ್ರತಿಭಟನೆಗೆ ಅವಕಾಶ ನೀಡಿದರೆ ಹೆಣ ಉರುಳುತ್ತವೆ ಎಂದಿದ್ದ ಲೋಕಸಭಾ ಸದಸ್ಯ ಜಗ್ಗೇಶ್ ವಿವಾದಾತ್ಮಕ ಹೇಳಿಕೆಯನ್ನು ಶಾಸಕ ಯತ್ನಾಳ ಸಮರ್ಥಿಸಿಕೊಂಡಿದ್ದಾರೆ. ನಿಮ್ಮ ಪ್ರಕಾರ ಅದು ವಿವಾದಾತ್ಮಕ ಇರಬೇಕು. ಟಿಪ್ಪು ಸುಲ್ತಾನ್ ಕಾಲದಲ್ಲಿ ಲಕ್ಷಾಂತರ ಕೊಡಗಿನ ನಾಗರೀಕರ ಕೊಲೆಯಾಗಿದೆ. ಕೊಡಗಿನಲ್ಲಿ ಸಂಧಾನಕ್ಕೆ ಕರೆದ ಟಿಪ್ಪು ಸುಲ್ತಾನ್ ಮೋಸ ಮಾಡಿದ್ದನು ಎಂದರು. ಅದಕ್ಕಾಗಿ ಕೊಡಗಿನ ಜನರಲ್ಲಿ ಟಿಪ್ಪು ಬಗ್ಗೆ ದ್ವೇಷವಿದೆ. ಕೊಡಗಿನ ಜಿಲ್ಲೆಯ ಜನರಿಗೆ ನೋವಾಗಿದ್ದನ್ನು ನಾವು ಗೌರವಿಸಬೇಕು ಎಂದರು.