ವಿಜಯಪುರ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಮೃದುವಾಗಿ ವ್ಯಕ್ತಪಡಿಸಿದ ಪ್ರಸಂಗ ಜಿಲ್ಲೆಯ ದೇವರಹಿಪ್ಪರಗಿ ಪಟ್ಟಣದಲ್ಲಿ ನಡೆದಿದೆ. ದೇವರ ಹಿಪ್ಪರಗಿ ಪಟ್ಟಣದಲ್ಲಿ ನಡೆದ ಸಂಗೊಳ್ಳಿ ರಾಯಣ್ಣ ಮೂರ್ತಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತು ಆರಂಭಿಸಿದ ಶಾಸಕ ಬಸನಗೌಡ ಪಾಟೀಲ ಯತ್ನಾಳ, ಸಿದ್ದರಾಮಯ್ಯ ಅವರ ಹಿಂದಿನ ಗತ್ತು, ಆರ್ಭಟ ಈ ಬಾರಿ ಕಾಣುತ್ತಿಲ್ಲ. ಈ ಬಗ್ಗೆ ಅವರನ್ನು ನಾನು ಖುದ್ದು ವಿಚಾರಿಸಿದಾಗ, ಇದು ನನ್ನ ಕೊನೆ ಅವಧಿಯಾಗಿದೆ ಎಂದು ಭಾವುಕರಾಗಿದ್ದರು, ಐದು ವರ್ಷ ಉತ್ತಮ ಆಡಳಿತ ನೀಡಬೇಕಾಗಿದೆ ಎಂದು ಹೇಳಿದರೂ, ಆ ವೇಳೆ ಐದು ವರ್ಷ ನೀವೇ ಸಿಎಂ ಇರುತ್ತೀರಿ ತಾನೆ? ಎಂದು ನಗೆ ಚಟಾಕಿ ಹಾರಿಸಿದೆ. ಆಗ ನೀನು ಮತ್ತೆ ಬೆಂಕಿ ಹಚ್ಚುವ ಕೆಲಸ ಮಾಡಬೇಡ ಎಂದು ಹೇಳಿದರು. ಅದಕ್ಕೆ ನಾನು ಸುಮ್ಮನಾದೆ ಎಂದೆ ಅಂದರು.
ರಾಜಕಾರಣವೇ ಬೇರೆ ಆತ್ಮೀಯತೆ ಬೇರೆ, ಅಧಿವೇಶನ ವೇಳೆ ನಾನು ಅಸ್ವಸ್ಥನಾಗಿ ಆಸ್ಪತ್ರೆಗೆ ದಾಖಲಾದಾಗ ಖುದ್ದು ಸಿಎಂ ಸಿದ್ದರಾಮಯ್ಯ ಆರೋಗ್ಯ ವಿಚಾರಿಸಲು ಬಂದಿದ್ದರು. ಆ ವೇಳೆ ನಡೆದ ಪ್ರಸಂಗ ನೆನೆಪಿಸಿಕೊಂಡಿದ್ದೇನೆ ಎಂದರು.
ಒಮ್ಮೆ ಜನಪ್ರತಿನಿಧಿ ಆದ ಮೇಲೆ ಅವರಿಗೆ ಸಿಗುವ ಗೌರವ ಎಲ್ಲರೂ ನೀಡಲೇ ಬೇಕು. ಈಗ ಕೆಲವರು ಇದ್ದಾರೆ. ಗ್ರಾಮ ಪಂಚಾಯಿತಿ ಸದಸ್ಯರು ಆಗಿರುವದಿಲ್ಲ ಅವರ ನಡುವಳಿಕೆ ನೋಡಬೇಕು ಎಂದರು. ಶಾಸಕರಾದವರು ಯಾವುದೇ ಪಕ್ಷದವರಾಗಿದ್ದರೂ ಸಹ ತಮ್ಮ ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ಅನುದಾನ ತರಲು ಸಿಎಂ ಭೇಟಿಯಾಗಲೇ ಬೇಕು.ಅದನ್ನೇ ಹೈಡಲೈನ್ ಮಾಡಲಾಗುತ್ತದೆ. ಸಿಎಂ ಏನು ಪಾಕಿಸ್ತಾನ ಮುಖ್ಯಮಂತ್ರಿಯಾ? ಮುಖ್ಯಮಂತ್ರಿ ಅಂದ್ರೆ ಶಾಸಕರು ಅವರು ಬಳಿ ಹೋಗೋದು ಸಹಜ ಕರ್ತವ್ಯವಾಗಿದೆ ಎಂದರು.
ಸಿದ್ದು ಪರ ಯತ್ನಾಳ ಬ್ಯಾಟಿಂಗ್ ಯಾಕೇ ಗೊತ್ತಾ..?
![](https://karnataka1news.com/wp-content/uploads/2023/08/IMG_20230829_111557-860x494.jpg)