ವಿಜಯಪುರ: ವಿಜಯಪುರ ಮಹಾನಗರ ಪಾಲಿಕೆ ವ್ಯಪ್ತಿಯಲ್ಲಿ ಸರ್ದಾರ ವಲ್ಲಭಯ್ ಪಟೇಲ್ ಸರ್ಕಲ್ ದಿಂದ ವಿಶ್ವೇಶ್ವರಯ್ಯ ಸರ್ಕಲ್ ವರೆಗೆ 10ಕೋಟಿ ಅನುದಾನದಲ್ಲಿ ರಸ್ತೆ ಕಾಮಗಾರಿ ಮುಂಜೂರು ಆಗಿದೆ. ಅದಕ್ಕಾಗಿ ಮಹಾನಗರ ಪಾಲಿಕೆ ವತಿಯಿಂದ ತೆರವು ಕಾರ್ಯಾಚರಣೆ ಮಾಡಲಾಗಿದೆ ಎಂದು ಮಹಾನಗರ ಪಾಲಿಕೆ ಆಯುಕ್ತ ವಿಜಯ ಮೆಕ್ಕಳಕಿ ಹೇಳಿದರು.
ವಿಜಯಪುರ ನಗರದಲ್ಲಿ ಸೋಮವಾರ ಮಾತನಾಡಿದ ಅವರು, ಮಹಾನಗರ ಪಾಲಿಕೆಯಿಂದ 81ಜನರಿಗೆ ನೋಟಿಸ್ ಜಾರಿಮಾಡಲಾಗಿತ್ತು. ಅದಕ್ಕಾಗಿ ಅತಿಕ್ರಮಣ ಮಾಡಿಕೊಂಡಿದ್ದ ಜಾಗವನ್ನು ತೆರವುಗೊಳಿಸಲಾಯಿತು ಎಂದರು. ಅಲ್ಲದೇ, ನಗರದ ಸೌಂದರ್ಯ, ಅಭಿವೃದ್ಧಿಗಾಗಿ ಕೆಲಸ ಮಾಡಲಾಗುತ್ತಿದೆ. ತೆರವು ಜಾಗದಲ್ಲಿ ವಿವಿಧ ಕಾಮಗಾರಿ ಕೈಗೊಳ್ಳಲಾಗುತ್ತದೆ ಎಂದರು.