ವಿಜಯಪುರ: ವರದಕ್ಷಿಣೆ ಖಿನ್ನತೆ ಹಿನ್ನಲೆ ಮಹಿಳೆ ಬಾವಿಗೆ ಜಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಎಸ್ಪಿ ಎಚ್ಡಿ ಆನಂದಕುಮಾರ ಮಾಹಿತಿ ನೀಡಿದರು.
ವಿಜಯಪುರದಲ್ಲಿ ಮಾತನಾಡಿದ ಅವರು, ಮಾಯಮ್ಮ ಜೊತಗೊಂಡ ಆತ್ಮಹತ್ಯೆ ಮಾಡಿಕೊಂಡಿದ್ದು, ಗಂಡ ಸೇರಿದಂತೆ ಕುಟುಂಬಸ್ಥರು ವರದಕ್ಷಿಣೆ ಕಿರುಕುಳ ನೀಡುತ್ತಿದ್ದರು. ಅದಕ್ಕಾಗಿ ಇದಕ್ಕೆ ಬೇಸತ್ತು ಬಾವಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇನ್ನೂ ಆರೋಪಗಳ ಬಂಧನಕ್ಕೆ ಒಂದು ತಂಡ ರಚನೆ ಮಾಡಲಾಗಿದೆ.
ಆರೋಪಿಗಳ ವಿರುದ್ಧ 304(B), 498(A) ಅಡಿಯಲ್ಲಿ ಇಂಡಿ ಗ್ರಾಮೀಣ ಪೊಲೀಸ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು, ಆದಷ್ಟು ಬೇಗನೆ ಆರೋಪಿಗಳ ಬಂಧನ ಮಾಡಲಾಗುವುದು ಎಂದರು.