ಬಾಗಲಕೋಟೆ: ಸಚಿವ ಮುರುಗೇಶ ನಿರಾಣಿ ಒಡೆತನದ ಡಿಸ್ಟಿಲರಿ ಘಟಕದಲ್ಲಿ ಸ್ಫೋಟ ಸಂಭವಿಸಿದ ಪರಿಣಾಮ ಓರ್ವ ಕಾರ್ಮಿಕ ಮೃತಪಟ್ಟು, ನಾಲ್ವರು ಗಾಯಗೊಂಡಿರುವ ಘಟನೆ ಬಾಗಲಕೋಟ ಜಿಲ್ಲೆಯ ಮುಧೋಳದಲ್ಲಿ ನಡೆದಿದೆ. ಗುರುನಾಥ ಹುಚ್ಚಣ್ಣವರ(27) ಮೃತ ಕಾರ್ಮಿಕ. ಗಾಯಗೊಂಡಿರುವ ನಾಲ್ವರನ್ನು ಚಿಕಿತ್ಸೆಗಾಗಿ ಮುಧೋಳದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಜೀವಕ್ಕೆ ತೊಂದರೆ ಇಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಮೃತ ಗುರುನಾಥ ಮುಧೋಳ ನಗರದ ಜುಂಜರಕೊಪ್ಪಗಲ್ಲಿ ನಿವಾಸಿ ಎಂದು ತಿಳಿದು ಬಂದಿದೆ. ಮುಧೋಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.