ವಿಜಯಪುರ: ಕಾರ್ ಚಾಲಕನ ಅತೀ ವೇಗ ಹಾಗೂ ನಿರ್ಲಕ್ಷ್ಯದಿಂದ ಕಾರವೊಂದು ರಸ್ತೆ ಪಕ್ಕದಲ್ಲಿ ನಿಲ್ಲಿಸಿದ ತಳ್ಳುವ ಗಾಡಿಗೆ ಕಾರ್ ಡಿಕ್ಕಿಯಾಗಿರುವ ಘಟನೆ ವಿಜಯಪುರ ನಗರದ ಬಾಗಲಕೋಟ ಕ್ರಾಸ್ ಬಳಿ ನಡೆದಿದೆ.
ರೆಹಮಾನ್ ಇನಾಮದಾರ್ ಎಂಬುರಿಗೆ ಸೇರಿದ ತಳ್ಳುವ ಗಾಡಿಗೆ ಕಾರ್ ಡಿಕ್ಕಿಯಾಗಿರುವ ಸಿಸಿಟಿವಿ ವಿಡಿಯೋ ಲಭ್ಯವಾಗಿದೆ. ಆದ್ರೇ, ಘಟನೆ ಬಳಿಕ ಕಾರ್ ಚಾಲನ ಕಾರ್ ಸಮೇತ ಪರಾರಿಯಾಗಿದ್ದಾನೆ. ಆದ್ರೇ, ಯಾವುದೇ ಪ್ರಾಣ ಹಾನಿಯಾಗಿಲ್ಲ. ಇನ್ನು ತಳ್ಳುವ ಗಾಡಿ ಸಂಪೂರ್ಣ ಜಖಂಗೊಂಡಿದೆ. ವಿಜಯಪುರ ಸಂಚಾರಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.