ವಿಜಯಪುರ: ಜಮೀನಿನಲ್ಲಿ ಬೆಳೆಗೆ ನೀರು ಹಾಯಿಸಲು ಬಾವಿಗೆ ಅಳವಡಿಸಿದ್ದ ಮೋಟರ್ ಚಾಲನೆ ಮಾಡಲು ಹೋಗಿದ್ದ ವೇಳೆ ಕಾಲು ಜಾರಿ ಬಾವಿಗೆ ಬಿದ್ದು ರೈತನೋರ್ವ ಮೃತಪಟ್ಟಿರುವ ಘಟನೆ ವಿಜಯಪುರ ಜಿಲ್ಲೆಯ ತಾಳಿಕೋಟಿ ತಾಲೂಕಿನ ಗೋಟಖಂಡ್ಕಿ ಗ್ರಾಮದಲ್ಲಿ ನಡೆದಿದೆ. ಮಡಿವಾಳಪ್ಪ ನಾಗಪ್ಪ ವಗ್ಗರ(65) ಬಾವಿಗೆ ಬಿದ್ದು ಸಾವನ್ನಪ್ಪಿರುವ ರೈತ. ಜಮೀನಿನಲ್ಲಿದ್ದ ಮೋಟರ್ ಚಾಲನೆ ಮಾಡುವ ಈ ದುರ್ಘಟನೆ ಆಗಿದೆ. ತಾಳಿಕೋಟೆ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.