ವಿಜಯಪುರ: ಭಾರತ ಸರ್ಕಾರದ ವಿರುದ್ಧ ಪ್ರತಿಭಟನೆ ಹಿನ್ನೆಲೆ ಜಿಲ್ಲಾ ಎಸ್ಡಿಪಿಐ ಜಿಲ್ಲಾಧ್ಯಕ್ಷ ವಿರುದ್ಧ ಕೇಸ್ ದಾಖಲಾಗಿರುವ ಘಟನೆ ವಿಜಯಪುರ ನಗರದಲ್ಲಿ ನಡೆದಿದೆ. ಜಿಲ್ಲಾಧ್ಯಕ್ಷ ಅತಾವುಲ್ಲಾ ದ್ರಾಕ್ಷಿ ವಿರುದ್ಧ ಕೇಸ್ ದಾಖಲಾಗಿದೆ. ಇನ್ನು ತಹಶಿಲ್ದಾರರ ಅನುಮತಿ ಪಡೆಯದೇ ಭಾರತ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ಅಲ್ಲದೇ, ಪ್ಯಾಲೆಸ್ತೇನ್ ಪರವಾಗಿ ದ್ರಾಕ್ಷಿ ಹಾಗೂ ಬೆಂಬಲಿಗರು ಪ್ರತಿಭಟನೆ ಮಾಡಿದ್ದರು. ಅದಕ್ಕಾಗಿ ದ್ರಾಕ್ಷಿ ವಿರುದ್ಧ ಕೇಸ್ ದಾಖಲು ಮಾಡಲಾಗಿದೆ. ಈ ಕುರಿತು ಗೋಳಗುಮ್ಮಟ್ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.