ವಿಜಯಪುರ: ಸಚಿವ ದಿನೇಶ್ ಗುಂಡೂರಾವ್ ಬಗ್ಗೆ ಶಾಸಕ ಯತ್ನಾಳ್ ವಿವಾದಾತ್ಮಕ ಹೇಳಿಕೆ ಹಿನ್ನೆಲೆ ವಿಜಯಪುರ ಗಾಂಧಿಚೌಕ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲು ಆಗಿದೆ. ಫ್ಲೈಯಿಂಗ್ ಸ್ಕ್ವಾಡ್ ದೂರಿನ ಮೇರೆಗೆ ಕೇಸ್ ದಾಖಲು ಮಾಡಲಾಗಿದೆ. ವಿಜಯಪುರ ನಗರದಲ್ಲಿ ನಿನ್ನೆ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಚಿವ ದಿನೇಶ್ ಗುಂಡೂರಾವ್ ಮನೆಯಲ್ಲಿ ಅರ್ಧ ಪಾಕಿಸ್ತಾನ ಐತಿ. ದೇಶ ವಿರೋಧಿ ಹೇಳಿಕೆ ಕೊಡುವುದು ಸಚಿವ ಗುಂಡೂರಾವ್ ಚಟ ಆಗೈತಿ ಎಂದು ಹೇಳಿಕೆ ನೀಡಿದ್ದರು. ಅದಕ್ಕಾಗಿ ಗಾಂಧಿಚೌಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.