ವಿಜಯಪುರ: ಜಮೀನಿನಲ್ಲಿರುವ ವಿದ್ಯುತ್ ಕಂಬದಲ್ಲಿ ಆಕಸ್ಮಿಕ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಕಬ್ಬು ಭಸ್ಮವಾಗಿರುವ ಘಟನೆ ವಿಜಯಪುರ ಜಿಲ್ಲೆ ಸಿಂದಗಿ ತಾಲೂಕಿನ ಕನ್ನೊಳ್ಳಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ರೈತ ಶಾಂತಾಬಾಯಿ ಕೊಳ್ಳುರ ಹಾಗೂ ಬಸವಂತರರಾಯ ಕೊಳ್ಳುರಗೆ ಸೇರಿದ 6ಎಕರೆ ಕಬ್ಬು ಬೆಂಕಿಗಾಹುತಿ ಆಗಿದೆ. ಇನ್ನು ಅಗ್ನಿ ಶಾಮಕ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಬೆಂಕಿ ನಂದಿಸಿದರು. ಸಿಂದಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.