ವಿಜಯಪುರ: ಏಳನೇ ದಿನದ ಗಣೇಶ ವಿಸರ್ಜನೆ ವೇಳೆ ಅವಘಡ ಸಂಭವಿಸಿ ಓರ್ವ ಅಸುನೀಗಿ, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ವಿಜಯಪುರ ನಗರದ ಗಾಂಧಿಚೌಕ್ ವೃತ್ತದ ಬಳಿಯ ಟಾಂಗಾ ಸ್ಟ್ಯಾಂಡ್ ಬಳಿ ನಡೆದಿದೆ. ವಿದ್ಯುತ್ ತಂತಿ ಮೇಲೆತ್ತುವ ವೇಳೆ ವಿದ್ಯುತ್ ಪ್ರವಹಿಸಿ ನಗರದ ಡೋಬಲೆ ಗಲ್ಲಿ ನಿವಾಸಿ ಶುಭಂ ಸಂಕಳ (21) ಮೃತಪಟ್ಟಿದ್ದಾನೆ. ಪ್ರಭಾಕರ ಜಂಗಲೆ ಹಾಗೂ ಲಖನ್ ಚವ್ಹಾಣ ಗಂಭೀರವಾಗಿ ಗಾಯಗೊಂಡಿದ್ದು, ಇಬ್ಬರನ್ನೂ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಇನ್ನು ಗಣೇಶನ ಮೂರ್ತಿ ಸಾಗಲು ಕೋಲಿನಿಂದ ವಿದ್ಯುತ್ ತಂತಿ ಎತ್ತುವ ವೇಳೆ ಕರೆಂಟ್ ಶಾಕ್ನಿಂದ ಈ ದುರ್ಘಟನೆ ಆಗಿದೆ. ನಗರದಲ್ಲಿ ಏಳನೇ ದಿನದ ನೂರಾರು ಗಣೇಶನ ಮೂರ್ತಿಗಳು ವಿಸರ್ಜನೆ ಮಾಡಲಾಯಿತು.
ಗಾಂಧಿಚೌಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಗಣಪತಿ ವಿಸರ್ಜನೆ ವೇಳೆ ಅವಘಡ ! ಓರ್ವ ಸಾವು ! ಇಬ್ಬರಿಗೆ ಗಂಭೀರ ಗಾಯ
