ವಿಜಯಪುರ: ಗಣೇಶ ಉತ್ಸವದಲ್ಲಿ ಯಾವುದೇ ಅಹಿತಕರ ಘಟನೆ ಆಗದಂತೆ ಹಬ್ಬವನ್ನು ಆಚರಣೆ ಮಾಡಬೇಕು ಎಂದು ಮುದ್ದೇಬಿಹಾಳ ಪಿಎಸ್ಐ ರೇಣುಕಾ ಜಕನೂರು ಹೇಳಿದರು.
ವಿಜಯಪುರ ಜಿಲ್ಲೆಯ ನಾಲತವಾಡ ಪಟ್ಟಣದಲ್ಲಿ ಗಣೇಶೋತ್ಸವದ ಅಂಗವಾಗಿ ಹೊರ ಠಾಣೆಯಲ್ಲಿ ಶಾಂತಿ ಸಭೆಯಲ್ಲಿ ಮಾತನಾಡಿದರು. ಇನ್ನು ಮುದ್ದೇಬಿಹಾಳ ಪಿಎಸ್ಐ ರೇಣುಕಾ ಜಕನೂರು ನೇತೃತ್ವದಲ್ಲಿ ಸಭೆ ಮಾಡಲಾಯಿತು. ಈ ಸಭೆಯಲ್ಲಿ
ಪಟ್ಟಣದ ಹಿಂದು, ಮುಸ್ಲಿಂ ಮುಖಂಡರು, ಗಣ್ಯರು ಪಾಲ್ಗೊಂಡಿದ್ದರು. ಅಲ್ಲದೇ, ಹಬ್ಬವನ್ನು ಸರ್ಕಾರದ ಆದೇಶವನ್ನು ಪಾಲನೆ ಮಾಡುತ್ತೇವೆ ಎಂದು ಸಭೆಯಲ್ಲಿ ಭಾಗವಹಿಸಿದ್ದ ಗಣ್ಯರು ಭರವಸೆ ನೀಡಿದರು.