ವಿಜಯಪುರ: ತೋಟದ ಮನೆಯಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಗೋವಾ ಬಿಯರ್ನ್ನು ಅಬಕಾರಿ ಪೊಲೀಸರು ದಾಳಿಗೈದಿರುವ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಅಥರ್ಗಾ ಗ್ರಾಮದಲ್ಲಿ ನಡೆದಿದೆ.
ರಾಮತೀರ್ಥ ತಾಂಡಾದ ಸಂಜುಕುಮಾರ ಚವ್ಹಾಣನ್ನು ಬಂಧಿಸಿದ್ದಾರೆ. ಸುಮಾರು 3,900 ಮೌಲ್ಯದ 19.5 ಲೀಟರ್ ಮದ್ಯವನ್ನು ಅಬಕಾರಿ ಪೊಲೀಸರು ಜಪ್ತಿಗೈದಿದ್ದಾರೆ. ಇಂಡಿ ಅಬಕಾರಿ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.