ಭೀಮಾತೀರದಲ್ಲಿ ಗನ್ ತೋರಿಸಿ ಬಂಗಾರದ ಅಂಗಡಿ ದರೋಡೆ

Karnataka 1 News
ಭೀಮಾತೀರದಲ್ಲಿ ಗನ್ ತೋರಿಸಿ ಬಂಗಾರದ ಅಂಗಡಿ ದರೋಡೆ

ಚಡಚಣ ::(ಹಲಸಂಗಿ)
ಹಲಸಂಗಿ ಗ್ರಾಮದ ಭೂಮಿಕಾ ಜ್ಯುವೆಲ್ಲರಿ* ಶಾಪಗೆ ಇಬ್ಬರು ಅಪರಿಚಿತರು ಕಪ್ಪು ಬಣ್ಣದ ಜಾಕೆಟ್ , ಕಪ್ಪು ಬಣ್ಣದ ಹೆಲ್ಮೆಟ್ ಧರಿಸಿಕೊಂಡು, ಕಪ್ಪು ಬಣ್ಣದ ಹೋಂಡಾ ಯೂನಿಕಾರ್ನ್ ಬೈಕ್ ಮೇಲೆ ಬಂದು, ಅಂಗಡಿ ಪಕ್ಕದಲ್ಲಿ ಬೈಕ್ ನಿಲ್ಲಿಸಿ ಅಂಗಡಿಯ ಮಾಲೀಕನದ *ಮಹಾರುದ್ರ ತಂದೆ ಸದಾಶಿವ ಕಂಚಗಾರ*

 

ಈತನಿಗೆ ಗನ್ ತೋರಿಸಿ ಆತನ ಬಂಗಾರದ ಅಂಗಡಿಯಲ್ಲಿ ಇದ್ದ ಸುಮಾರು *205 ಗ್ರಾಂ ಬಂಗಾರದ ಆಭರಣ ಮತ್ತು 1 kg ಬೆಳ್ಳಿಯನ್ನು* ಕಳ್ಳತನ ಮಾಡಿದ್ದು, ಇವರು ಕಳ್ಳತನ ಮಾಡುವ ವೇಳೆಯಲ್ಲಿ ಪಕ್ಕದ ಮೊಬೈಲ್ ಅಂಗಡಿಯವನಾದ, *ಅನಿಲ್ ಬಸಣ್ಣ ಗಲಗಲಿ* ಈತನು ಇವರು ಮಾಡುವ ಕೃತ್ಯವನ್ನು ಮೊಬೈಲ್ ನಲ್ಲಿ ರೆಕಾರ್ಡ್ ಮಾಡಿಕೊಳ್ಳುತ್ತಿದ್ದನು ವಿಡಿಯೋ ರೆಕಾರ್ಡ್ ಮಾಡುತ್ತಿರುವುದನ್ನು ನೋಡಿ

ಭೀಮಾತೀರದಲ್ಲಿ ಗನ್ ತೋರಿಸಿ ಬಂಗಾರದ ಅಂಗಡಿ ದರೋಡೆ

ಆ ವ್ಯಕ್ತಿಯ ಕಡೆಗೆ ಅಪರಿಚಿತ ಕಳ್ಳನು ಗುಂಡು ಹಾರಿಸಿದ್ದು ಅದು ಆ ವ್ಯಕ್ತಿಯ ಪಕ್ಕದಲ್ಲೇ ಇದ್ದ 18 ವರ್ಷದ ಯುವಕನ ಕಾಲಿಗೆ ಗುಂಡು ತಗುಲಿದೆ. ಅವನನ್ನು ತಕ್ಷಣ ಆಸ್ಪತ್ರೆಗೆ ಕಳುಹಿಸಿದ್ದು ಆತನು ಯಾವುದೇ ಪ್ರಾಣಾಪಾಯ ಇಲ್ಲದೆ ಆರಾಮವಾಗಿ ಇದ್ದು ಚಿಕಿತ್ಸೆ ಪಡೆಯುತ್ತಿದ್ದಾನೆ. ಸ್ಥಳಕ್ಕೆ ಪೊಲೀಸರು ಅಧಿಕಾರಿಗಳು ಭೇಟಿ ನೀಡಿದ್ದು ತನಿಖೆಯನ್ನು ಕೈಗೊಂಡಿದ್ದಾರೆ

Share This Article
WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

";