ಹಾವೇರಿ: ಗ್ರಾಮ ಪಂಚಾಯತಿ ಸದಸ್ಯನೋರ್ವ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ
ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನ ಕಾರಡಗಿ ಗ್ರಾಮ ಪಂಚಾಯತಿಯಲ್ಲಿ ನಡೆದಿದೆ.
ಜಾಫರ್ಸಾಬ್ ಖಾದರಸಾಬ್ ಸಂಶಿ ಲೋಕಾಯುಕ್ತ ಬಲೆಗೆ ಬಿದ್ದಿರುವ ಗ್ರಾಮ ಪಂಚಾಯತಿ ಸದಸ್ಯ. ಮಳೆಯಿಂದ ಹಾನಿಯಾದ ಮನೆಯ ಜಿಪಿಎಸ್ ಮಾಡಿಸಲು ಲಂಚಕ್ಕೆ ಬೇಡಿಕೆ ಇಟ್ಟಿದ್ದನ್ನು. ಮುಂಗಡವಾಗಿ 20 ಸಾವಿರ ಪಡೆಯುವಾಗ ಲೋಕಾಯುಕ್ತರು ವಶಕ್ಕೆ ಪಡೆದುಕೊಂಡಿದ್ದಾರೆ. ದಾದಾಪೀರ್ ಅವರಿಂದ ಲಂಚ ಪಡೆಯುವಾಗ ಈ ಘಟನೆ ನಡೆದಿದೆ. ಹಾವೇರಿ ಲೋಕಾಯುಕ್ತರು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.
ಏಲಕ್ಕಿ ನಾಡಿನಲ್ಲಿ ಗ್ರಾಮ ಪಂಚಾಯ್ತಿ ಸದಸ್ಯ ಅಂದರ್
![](https://karnataka1news.com/wp-content/uploads/2023/11/IMG_20231123_083821-860x447.jpg)