ವಿಜಯಪುರ: ಗುಮ್ಮಟನಗರಿ ಖ್ಯಾತಿಯ ವಿಜಯಪುರದಲ್ಲಿ ಮಂಗಳವಾರ 67ನೇ ಕನ್ನಡ ರಾಜ್ಯೋತ್ಸವವನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಯಿತು.
ವಿಜಯಪುರದ ಡಾ. ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿ ರಾಷ್ಟ್ರ ಧ್ವಜಾರೋಹಣವನ್ನು ಜಿಲ್ಲಾಧಿಕಾರಿ ವಿಜಯಮಹಾಂತೇಶ ದಾನಮ್ಮನವರ ನೆರವೇರಿಸಿದರು. ಅಲ್ಲದೇ, ಪೊಲೀಸ ಇಲಾಖೆ, 19 ಕವಾಯತ ತಂಡದವರು ಡಿಸಿಯವರಿಗೆ ಗೌರವ ವಂದನೆ ಸಲ್ಲಿಸಿದರು. ಅಲ್ಲದೇ, ಈ ವೇಳೆಯಲ್ಲಿ ಶಾಸಕ ಬಸನಗೌಡ ಪಾಟೀಲ ಯತ್ನಾಳ, ಎಸ್ಪಿ ಆನಂದಕುಮಾರ, ಜಿಲ್ಲಾ ಪಂಚಾಯತ ಸಿಇಓ ರಾಹುಲ್ ಶಿಂಧೆ ಸೇರಿದಂತೆ ಗಣ್ಯರು ಭಾಗವಹಿಸಿದರು.