ವಿಜಯಪುರ: ಮಹಾರಾಷ್ಟ್ರ ಮತ್ತು ಕರ್ನಾಟಕ ಗಡಿ ಭಾಗ ಸಮಸ್ಯೆ ಹುಟ್ಟು ಹಾಕಿದ್ದು ಕಾಂಗ್ರೆಸ್ ಪಕ್ಷ. ಇದರ ಪಿತಾಮಹ ಪಂಡಿತ ಜವಾಹರ್ಲಾಲ್ ನೆಹರು ಆಗಿದ್ದಾರೆ ಎಂದು ಮಹಾರಾಷ್ಟ್ರ ಅರಣ್ಯ ಮತ್ತು ಮೀನುಗಾರಿಕೆ ಸಚಿವ ಸುಧೀರ ಮುನಗಂಟಿವಾರ್ ಆರೋಪಿಸಿದರು. ವಿಜಯಪುರ ನಗರದಲ್ಲಿ ಗುರುವಾರ ನಡೆದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದ್ಯ ಮಹಾರಾಷ್ಟ್ರ ಮತ್ತು ಕರ್ನಾಟಕ ಗಡಿವಿವಾದ ಸುಪ್ರಿಂಕೋರ್ಟ್ನಲ್ಲಿದೆ. ಈ ಬಗ್ಗೆ ಮಾತನಾಡುವುದು ಸೂಕ್ತವಲ್ಲ. ಕರ್ನಾಟಕ ಏಕೀಕರಣವಾದಾಗಿನಿಂದ ಈ ಸಮಸ್ಯೆ ಉದ್ಘವವಾಗಿದೆ. ಇದು ಯಾವುದೇ ರಾಜಕೀಯ ಸಮಸ್ಯೆ ಅಲ್ಲ, ಎರಡು ರಾಜ್ಯಗಳ ನಡುವೆ ಇರುವ ವಿವಾದವನ್ನು ಕಾಂಗ್ರೆಸ್ ಇನ್ನೂ ಜೀವಂತವಾಗಿಟ್ಟಿದೆ ಎಂದರು.