ವಿಜಯಪುರ: ತೊರವಿ ಗ್ರಾಮದಲ್ಲಿ ದ್ರಾಕ್ಷಿ ಮತ್ತು ವೈನ್ ಬೋರ್ಡ್ಗೆ ಸೇರಿದ ಜಮೀನಿನಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿಯಿಂದ ಶಂಕುಸ್ಥಾಪನೆ ಕಾರ್ಯಕ್ರಮ ಸೆಪ್ಟೆಂಬರ್ 30ರಂದು ನಡೆಯಲಿದೆ ಎಂದು ಬೋರ್ಡ್ ನಿರ್ದೇಶಕ ಎಸ್ ಎಸ್ ರುದ್ರಗೌಡ ಹೇಳಿದರು.
ವಿಜಯಪುರ ನಗರದಲ್ಲಿ ಬುಧವಾರ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಅಂದು ಬೆಳಗ್ಗೆ 11ಕ್ಕೆ ಸಿಎಂ ಬೊಮ್ಮಾಯಿಯಿಂದ ಕಾರ್ಯಕ್ರಮ ನಡೆಯಲಿದೆ. ಜಿಲ್ಲೆಯಲ್ಲಿ ಅತಿ ಹೆಚ್ಚು ದ್ರಾಕ್ಷಿ ಬೆಳೆಯಲಾಗುತ್ತಿದೆ. ಶೇ.90 ರಷ್ಟು ಒಣ ದ್ರಾಕ್ಷಿಯಾಗಿ ಮಾರ್ಪಡಿಸಿ ಶೀತಲ ಗೃಹಗಳಲ್ಲಿ
ಸಂಗ್ರಹಿಸಿ ಬೇಡಿಕೆ ಮತ್ತು ಪೂರೈಕೆ ಆಧಾರಮೇಲೆ ಮಾರಾಟ ಮಾಡಲಾಗುತ್ತಿದೆ. ಒಣ ದ್ರಾಕ್ಷಿಯ ಗುಣಮಟ್ಟವನ್ನು ಅಂತರಾಷ್ಟ್ರೀಯ ಗುಣಮಟ್ಟಕ್ಕೆ ಸುಧಾರಿಸಲು ಅವಕಾಶಗಳಿವೆ. ದ್ರಾಕ್ಷಿಗೆ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಹೆಚ್ಚಿನ ಬೇಡಿಕೆ ಇರುತ್ತದೆ. ಈ ಹಿನ್ನೆಲೆಯಲ್ಲಿ ದ್ರಾಕ್ಷಿ
ಬೆಳಗಾರರ ಹಿತದೃಷ್ಟಿಯಿಂದ ದ್ರಾಕ್ಷಿ ಮತ್ತು ದ್ರಾಕ್ಷಾರಸ ಮಂಡಳಿಯ ಮೂಲಕ ತೊರವಿ ಗ್ರಾಮದಲ್ಲಿ 35 ಕೋಟಿಗಳ ವೆಚ್ಚದಲ್ಲಿ ಅತ್ಯಾಧುನಿಕ ಶೈತ್ಯ ಸಂಗ್ರಹ ಸೌಲಭ್ಯವನ್ನು ಪಿಪಿಪಿ ಆಧಾರದ ಮೇಲೆ ನಿರ್ಮಿಸಲಾಗುತ್ತಿದೆ ಎಂದರು.