ದಕ್ಷಿಣ ಕನ್ನಡ: ಶಿಕ್ಷಕ ಹುದ್ದೆಯ ನಿರೀಕ್ಷೆಯಲ್ಲಿದ್ದವರಿಗೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಭರ್ಜರಿ ಸಿಹಿಸುದ್ದಿ ಘೋಷಣೆ ಮಾಡಿದ್ದಾರೆ. ದಕ್ಷಿಣ ಕನ್ನಡದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಬರುವ 15 ದಿನದೊಳಗೆ 15 ಸಾವಿರ ಶಿಕ್ಷಕರ ನೇಮಕಾತಿ ಅಂತಿಮ ಪ್ರಕ್ರಿಯೆ ನಡೆಯಲಿದೆ. 15 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ನಡೆಯಲಿದ್ದು, 15 ಸಾವಿರ ಶಿಕ್ಷಕರ ಸಿಇಟಿ ಈಗಾಗಲೇ ಆಗಿದ್ದು, ಕಾನೂನು ಕಾರಣಕ್ಕೆ ಸ್ವಲ್ಪ ವಿಳಂಬವಾಗಿದ್ದು, ಶೀಘ್ರದಲ್ಲೇ ನೇಮಕಾತಿ ಪಟ್ಟಿ ಪ್ರಕಟವಾಗಲಿದೆ ಎಂದರು.