![](https://karnataka1news.com/rugleeps/2023/05/IMG_20230506_104829-1024x461.jpg)
ವಿಜಯಪುರ: ವಿಜಯಪುರದ 19ನೇ ವಾರ್ಡ್ನ ಮಹಾನಗರ ಪಾಲಿಕೆ ಸದಸ್ಯೆ ಪತಿ ಹಾಗೂ ರೌಡಿಶೀಟರ್ ಮೇಲೆ ದುಷ್ಕರ್ಮಿಗಳು ಫೈರಿಂಗ್ಗೈದಿರುವ ಘಟನೆ
ವಿಜಯಪುರ ನಗರದ ಚಾಂದಪುರ ಕಾಲೋನಿಯಲ್ಲಿ ಶನಿವಾರ ನಡೆದಿದೆ. ರೌಡಿಶೀಟರ್ ಹೈದರ್ ಅಲಿ ನದಾಫ್ ಹತ್ಯೆ ಆಗಿದ್ದಾನೆ. ಇನ್ನೂ ಫೈರಿಂಗ್ ಮಾಡಿರುವ ಹಿನ್ನೆಲೆ ಸ್ಥಳದಲ್ಲಿಯೇ ಹೈದರ್ ಅಲಿ ನದಾಫ್ ಸಾವನ್ನಪ್ಪಿದ್ದಾನೆ. ಅಲ್ಲದೇ, ಹತ್ಯೆಗೈದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ಪರಿಶೀಲನೆ ನಡೆಸಿದರು. ಜಲನಗರ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.