ವಿಜಯಪುರ: ವಿಧಾನಸಭಾ ಚುನಾವಣೆ ಹಿನ್ನೆಲೆ ವಿಜಯಪುರ ಜಿಲ್ಲೆಯ ನಾಲ್ಕು ಕ್ಷೇತ್ರಗಳ ಬಿಜೆಪಿ ಅಭ್ಯರ್ಥಿಗಳ ಹೆಸರನ್ನು ಹೈ ಕಮಾಂಡ ಘೋಷಣೆ ಮಾಡಿದೆ. ವಿಜಯಪುರ ನಗರ ಬಸನಗೌಡ ಪಾಟೀಲ ಯತ್ನಾಳ, ಬಬಲೇಶ್ವರ ಕ್ಷೇತ್ರ ವಿಜುಗೌಡ ಪಾಟೀಲ್, ಮುದ್ದೇಬಿಹಾಳ ಕ್ಷೇತ್ರ ಎ.ಎಸ್.ಪಾಟೀಲ ನಡಹಳ್ಳಿ, ಸಿಂದಗಿ ಕ್ಷೇತ್ರ ರಮೇಶ ಭೂಸನೂರಗೆ ಟಿಕೆಟ್ ನೀಡಲಾಗಿದೆ. ಆದ್ರೆ, ನಾಗಠಾಣ, ದೇವರಹಿಪ್ಪರಗಿ, ಬಸವನಬಾಗೇವಾಡಿ, ಇಂಡಿ ಕ್ಷೇತ್ರದ ಟಿಕೆಟ್ ಬಾಕಿ ಇಡಲಾಗಿದೆ. ಇನ್ನೂ ನಾಲ್ಕು ಕ್ಷೇತ್ರದ ಟಿಕೆಟ್ ಆಕಾಂಕ್ಷಿಗಳಿಗೆ ಟೆನ್ಷನ್ ಆರಂಭವಾಗಿದೆ. ಹೈ ಕಮಾಂಡ್ ಯಾರಿಗೆ ಟಿಕೆಟ್ ನೀಡುತ್ತದೆ ಎಂದು ಕಾಯ್ದುನೋಡಬೇಕಿದೆ.