ವಿಜಯಪುರ: ಅಡುಗೆ ಅನಿಲ ಸ್ಫೋಟಗೊಂಡು ಮನೆಯ ಮೇಲ್ಛಾವಣಿ ಕುಸಿತಗೊಂಡಿರುವ ಘಟನೆ
ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ಯತ್ನಾಳ್ ಗ್ರಾಮದಲ್ಲಿ ನಡೆದಿದೆ. ಮನೆಯಲ್ಲಿ ಯಾರು ಇಲ್ಲದ ವೇಳೆ ಅವಘಡ ಸಂಭವಿಸಿ, ಅನಾಹುತ ತಪ್ಪಿದೆ. ಗ್ರಾಮದ ಕಲಪ್ಪ ಎಂಬುವರ ಮನೆಯಲ್ಲಿ ಘಟನೆ ಆಗಿದೆ. ಅಲ್ಲದೇ,
ಮನೆಯ ಮೇಲ್ಚಾವಣಿ ಕುಸಿದ ಪರಿಣಾಮ ಎರಡು ಮೇಕೆಗಳು ಸಾವನ್ನಪ್ಪಿ, ಮನೆಯಲ್ಲಿದ್ದ ವಸ್ತುಗಳು ಹಾನಿಯಾಗಿವೆ. ತಿಕೋಟಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.