ವಿಜಯಪುರ: ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾಗಿರುವ ಘಟನೆ ವಿಜಯಪುರ ನಗರದ ಬೆಂಗಳೂರು ಹೈವೇ ರಸ್ತೆಯಲ್ಲಿ ಬುಧವಾರ ನಡೆದಿದೆ. ಇನ್ನೂ ಲಾರಿ ಪಲ್ಟಿಯಾಗಿರುವ ಪರಿಣಾಮ ಲಾರಿ ಚಾಲಕನಿಗೆ ಸಣ್ಣಪುಟ್ಟ ಗಾಯಾಳು ಆಗಿದ್ದಾವೆ. ಆದ್ರೇ, ಯಾವುದೇ ಪ್ರಾಣ ಹಾನಿಯಾಗಿಲ್ಲ. ಅಲ್ಲದೇ, ಲಾರಿಯಲ್ಲಿದ್ದ ಲಕ್ಷಾಂತರ ಮೌಲ್ಯದ ಜೋಳ ಹಾನಿಯಾಗಿದೆ. ಲಾರಿಯಲ್ಲಿ ಜೋಳ ಸಾಗಿಸುವ ವೇಳೆ ಲಾರಿ ಪಲ್ಟಿಯಾಗಿದೆ. ಇದರಿಂದ ಜೋಳ ರಸ್ತೆ ಪಾಲಾಗಿದೆ. ಗೋಳಗುಮ್ಮಟ್ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.