ವಿಜಯಪುರ: ಹಾಡುಹಗಲೇ ಮನೆಯ ಬೀಗ ಒಡೆದು ಮನೆಯಲ್ಲಿದ್ದ ಚಿನ್ನ, ಬೆಳ್ಳಿ ಕಳ್ಳರು ದೋಚಿಕೊಂಡು ಪರಾರಿಯಾಗಿರುವ ಘಟನೆ ವಿಜಯಪುರದ ಸದಾಶಿವ ನಗರದಲ್ಲಿ ಶುಕ್ರವಾರ ನಡೆದಿದೆ. ಗೀತ ಕುಲಕರ್ಣಿ ಎಂಬುವರ ಮನೆಯಲ್ಲಿ ಕಳ್ಳತನ ಆಗಿದೆ. ಮನೆಯಲ್ಲಿದ್ದ 6 ತೊಲಿ ಚಿನ್ನ, 1 ಕೆಜಿ ಬೆಳ್ಳಿ ಹಾಗೂ 5 ರೂಪಾಯಿಯ 100 ಹೊಸ ಕಾಯಿನ್ ಕಳ್ಳತನಗೈದು ಪರಾರಿಯಾಗಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು, ಜಲನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.