ವಿಜಯಪುರ: ಪತ್ನಿ ಮಾಡಿದ ಕಬಾಬ್ ಟೇಸ್ಟ್ ಇಲ್ಲೆಂದು ಪತಿ ಸೂಸೈಡ್ ಮಾಡಿಕೊಂಡಿರುವ ಘಟನೆ ಬನ್ನೇರುಘಟ್ಟ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಎಂ.ಸುರೇಶ್(48) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯಾಗಿದ್ದಾನೆ. ಸುರೇಶ್ ಗಾರ್ಮೆಂಟ್ಸ್ನಲ್ಲಿ ಕೆಲಸ ಮಾಡುತ್ತಿದ್ದ. ಪತ್ನಿ ಶಾಲಿನಿಗೆ ಕಬಾಬ್ ಮಾಡಲು ಹೇಳಿದ್ದ, ಕಬಾಬ್ ತಿಂದು ಟೆಸ್ಟ್ ಇಲ್ಲ ಅಂತಾ ಉಗುಳಿದ್ದಾನೆ. ಇದರಿಂದ ಜಗಳ ಜೋರಾಗಿ ಸುರೇಶ್ ಪತ್ನಿ ಶಾಲಿನಿಗೆ ಕೋಲಿನಿಂದ ಹಿಗ್ಗಾಮುಗ್ಗಾ ಥಳಿಸಿದ್ಧಾನೆ. ಪೊಲೀಸರಿಗೆ ಪತ್ನಿ ಗಂಡನ ವಿರುದ್ಧ ಹೇಳಿಕೆ ನೀಡಿದ್ದಾಳೆ. ಇದರಿಂದ ಮರಕ್ಕೆ ನೇಣುಬಿಗಿದ ಸ್ಥಿತಿಯಲ್ಲಿ ಸುರೇಶ್ ಮೃತದೇಹ ಪತ್ತೆಯಾಗಿದೆ. ಈ ಪ್ರಕರಣ ಬನ್ನೇರುಘಟ್ಟ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.