ವಿಜಯಪುರ: ಬಿಜೆಪಿ ಪಕ್ಷ ಮನೆಯೊಂದು ಮೂರು ಬಾಗಿಲು ಆಗಿದೆ ಎಂದು ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ಹೇಳಿದರು. ವಿಜಯಪುರ ನಗರದಲ್ಲಿ ಮಾಧ್ಯಮದ ಎದುರು ಮಾತನಾಡಿದ ಅವರು, ಬಿಜೆಪಿಯಲ್ಲಿ ಭವಿಷ್ಯ ಇಲ್ಲ.
ಅದಕ್ಕಾಗಿ ನಾನು ಅರ್ಥ ಮಾಡ್ಕೊಂಡು ಬಿಜೆಪಿಯ ಮನೆ ಬಿಟ್ಟು ಹೊರಗಡೆ ಬಂದೇನಿ ಎಂದು ಕಿಡಿಕಾರಿದರು. ಅಲ್ಲದೇ, ಬಿಜೆಪಿಯಲ್ಲಿ ಆಂತರಿಕ ಕಲಹ ಬಹಳ ಇದೆ. ರಾಜ್ಯದ ಜನತೆ ಬಿಜೆಪಿ ಪಕ್ಷವನ್ನು ನೋಡುತ್ತಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಜನತೆ ಕಾಂಗ್ರೆಸ್ಗೆ ಆಶೀರ್ವಾದ ಮಾಡುತ್ತಾರೆ. ಮುಂದಿನ 20 ವರ್ಷ ಬಿಜೆಪಿ ವಿರೋಧ ಪಕ್ಷದಲ್ಲಿ ಇರುತ್ತದೆ. ಅದಕ್ಕಾಗಿ ಕಾಂಗ್ರೆಸ್ಗೆ ಜನತೆ ಆಶೀರ್ವಾದ ಮಾಡುತ್ತಾರೆ ಎಂದರು. ನೋಡ್ತಾ ಇರಿ, ನಾವು ಇರ್ತೇವಿ, ನೀವ ಇರ್ತೇರಿ ಎಂದರು.