ವಿಜಯಪುರ: ಲಾರಿಯೊಂದು ಹೊತ್ತು ಉರಿದಿರುವ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಹೊರ್ತಿ ರಸ್ತೆಯಲ್ಲಿ ನಡೆದಿದೆ.
ವಿಜಯಪುರ ಮಾರ್ಗವಾಗಿ ಮುಂಬೈಗೆ ಎಳ್ಳ ಎಣ್ಣೆ ತೆಗೆದುಕೊಂಡು ಹೋಗುತ್ತಿದ್ದ ವೇಳೆಯಲ್ಲಿ ಲಾರಿ ಎಂಜಿನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದ್ದು, ತದನಂತರ ಲಾರಿ ಸಂಪೂರ್ಣವಾಗಿ ಭಸ್ಮವಾಗಿದೆ. ಅಲ್ಲದೇ, ಲಾರಿಯಲ್ಲಿದ್ದ ಚಾಲಕನಿಗೆ ಜಸ್ಟ್ ಬಚಾವ್ ಆಗಿದ್ದಾನೆ. ಇನ್ನು ಲಾರಿಯ ಮಾಲೀಕ ಕುರಿತು ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ. ಹೊರ್ತಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.