ವಿಜಯಪುರ: ಅಂಗಡಿಯಲ್ಲಿ ಸ್ವಚ್ಛತೆಗೆ ಆದ್ಯತೆ ನೀಡದ ಅಂಗಡಿ ಹಾಗೂ ಅಕ್ರಮವಾಗಿ ಪ್ಲಾಸ್ಟಿಕ್ ಬಳಕೆ ಮಾಡುತ್ತಿದ್ದ ಅಂಗಡಿಗಳ ಮೇಲೆ ಮಹಾನಗರ ಪಾಲಿಕೆ ಅಧಿಕಾರಿಗಳು ದಾಳಿಗೈದಿರುವ ಘಟನೆ ವಿಜಯಪುರದ ನಗರದ ಸೊಲ್ಲಾಪುರ ರಸ್ತೆಯಲ್ಲಿ ಶನಿವಾರ ನಡೆದಿದೆ. ಮಹಾನಗರ ಪಾಲಿಕೆ ಆಯುಕ್ತ ಮೆಕ್ಕಳಕಿ ನೇತೃತ್ವದಲ್ಲಿ ಅಂಗಡಿಯ ಮೇಲೆ ದಾಳಿಗೈದು ನೋಟೀಸ್ ನೀಡಿ ದಂಡ ವಿಧಿಸಿದ್ದಾರೆ. ಅಲ್ಲದೇ, ಅಂಗಡಿಯಲ್ಲಿ ಪ್ಲಾಸ್ಟಿಕ್ ಬಳಕೆ ಮಾಡುತ್ತಿದ್ದ ಪ್ಲಾಸ್ಟಿಕ್ ವಸ್ತುಗಳನ್ನು ಜಪ್ತಿಗೈದಿದ್ದಾರೆ. ಇನ್ನೂ ಪ್ಲಾಸ್ಟಿಕ್ ಬಳಸದಂತೆ ಮಾಲೀಕರಿಗೆ ಎಚ್ಚರಿಕೆ ನೀಡಿದರು. ದಾಳಿ ವೇಳೆ ಅಧಿಕಾರಿಗಳಾದ ಅಶೋಕ ಸಜ್ಜನ, ಸುನಿಲ್ ಪಾಟೀಲ ಇದ್ದರು.