ವಿಜಯಪುರ: ಮಹಾನಗರ ಪಾಲಿಕೆ ಚುನಾವಣೆಯ ಪ್ರಚಾರದಲ್ಲಿ ಕಾಂಗ್ರೆಸ್ನ ಇಬ್ಬರ ಸದಸ್ಯರು ಹೊಡೆದಾಡಿಕೊಂಡಿರುವ ಘಟನೆ ವಿಜಯಪುರದ ರಹೀಂನಗರದಲ್ಲಿ ನಡೆದಿದೆ.
ನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಜಮೀರ್ಅಹ್ಮದ ಭಕ್ಷಿ ಹಾಗೂ ಕಾಂಗ್ರೆಸ್ ಕಾರ್ಯಕರ್ತ ಮೋಸಿನ್ ಮಧ್ಯೆ ಗಲಾಟೆ ಆಗಿದೆ. ಇನ್ನು ಗಲಾಟೆ ಮಾತಿಗೆ ಮಾತು ಬೆಳೆದು ಹೊಡೆದಾಟ ಮಾಡಿಕೊಂಡಿದ್ದಾರೆ. ಇನ್ನು ವಾರ್ಡ್ ನಂಬರ 33ರ ಕಾಂಗ್ರೆಸ್ ಅಭ್ಯರ್ಥಿ ಆರತಿ ಶಾಹಪುರ ಪರ ಪ್ರಚಾರದ ಸಂದರ್ಭದಲ್ಲಿ ಈ ಘಟನೆ ನಡೆದಿದ್ದು, ಈ ವಿಡಿಯೋವನ್ನು ಸ್ಥಳೀಯರು ಮೊಬೈಲ್ನಲ್ಲಿ ಹಿಡಿದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿದ್ದು, ಇನ್ನು ತದನಂತರ ಉಳಿದ ಕಾರ್ಯಕರ್ತರು ಹೊಡೆದಾಟವನ್ನು ಬಿಡಿಸಿದ್ದಾರೆ. ಗಾಂಧಿಚೌಕ್ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.