ವಿಜಯಪುರ: ಜಿಲ್ಲೆಯಲ್ಲಿ ಭೂಕಂಪನ ಹಿನ್ನಲೆ ನಾಳೆ ತಜ್ಞರು ವಿಜಯಪುರಕ್ಕೆ ಭೇಟಿ ನೀಡಲಿದ್ದಾರೆ ಎಂದು ಜಿಲ್ಲಾಧಿಕಾರಿ ವಿಜಯಮಹಾಂತೇಶ ದಾನಮ್ಮನವರ ಹೇಳಿದರು.
ನಗರದಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಇಬ್ಬರು ತಜ್ಞರು ಉಕ್ಕಲಿ, ಬರಟಗಿ, ಕನ್ನೂರ ಸೇರಿದಂತೆ ನಾನಾ ಸ್ಥಳಕ್ಕೆ ಭೇಟಿ ನೀಡುತ್ತಾರೆ.
ಅಲ್ಲದೇ, ಬರುವ ವೇಳೆಯಲ್ಲಿ ಭೂಮಿ ಕಂಪನದ ಯಂತ್ರಗಳನ್ನು ತೆಗೆದುಕೊಂಡು ಬರುತ್ತಿದ್ದಾರೆ. ಅದರಿಂದ ಭೂಮಿ ಕಂಪನದ ವರದಿ ನೀಡಲಿದ್ದಾರೆ. ಇದರ ಬಳಿಕ ಮಾಹಿತಿ ತಿಳಿದು ಬರಲಿದೆ ಎಂದರು.