ವಿಜಯಪುರ: ವಿಜಯಪುರ: ಜಿಲ್ಲೆಯಲ್ಲಿ ಜಾನುವಾರುಗಳಲ್ಲಿ ಚರ್ಮಗಂಟು ರೋಗ ಕಾಣಿಸಿಕೊಂಡು ಜಾನುವಾರು ಮೃತಪಟ್ಟಿವೆ ಎಂದು ಜಿಲ್ಲಾಧಿಕಾರಿ ವಿಜಯಮಹಾಂತೇಶ ದಾನಮ್ಮನವರ ಮಾಹಿತಿ ನೀಡಿದರು.
ವಿಜಯಪುರ ನಗರದಲ್ಲಿ ಮಾತನಾಡಿದ ಅವರು, ಸೆಪ್ಟೆಂಬರ್ 2022 ರಿಂದ ಜಾನುವಾರುಗಳಲ್ಲಿ ರೋಗ ಕಾಣಿಸಿಕೊಂಡಿದೆ. ಜಿಲ್ಲೆಯ 130 ಹಳ್ಳಿಗಳಲ್ಲಿ ರೋಗ ಕಾಣಿಸಿಕೊಂಡು 321 ಜಾನುವಾರುಗಳು ಸಾವನ್ನಪ್ಪಿವೆ ಎಂದರು. ಅದಕ್ಕಾಗಿ ಜಾನುವಾರು ಸಂತೆ ನಿರ್ಬಂಧ ವಿಧಿಸಲಾಗಿದೆ. ಮಹಾರಾಷ್ಟ್ರ ಗಡಿಭಾಗದಲ್ಲಿ ಆರು ಚೆಕ್ ಪೋಸ್ಟ್ ತೆರೆಯಲಾಗಿದೆ. ಜಾನುವಾರುಗಳಿಗೆ ಲಸಿಕೆ ಹಾಕಲಾಗಿದೆ. ಈ ರೋಗದ ತೀವ್ರತೆ ಗಮನಿಸಿ ಬರುವ ಫೆಬ್ರವರಿ15 ರ ನಂತರ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದರು.
ಜಿಲ್ಲೆಯಲ್ಲಿ ಚರ್ಮಗಂಟು ರೋಗಕ್ಕೆ ಜಾನುವಾರುಗಳು ಬಲಿ.. ಡಿಸಿ ಸ್ಪಷ್ಟನೆ…
![ಜಿಲ್ಲೆಯಲ್ಲಿ ಚರ್ಮಗಂಟು ರೋಗಕ್ಕೆ ಜಾನುವಾರುಗಳು ಬಲಿ.. ಡಿಸಿ ಸ್ಪಷ್ಟನೆ… ಜಿಲ್ಲೆಯಲ್ಲಿ ಚರ್ಮಗಂಟು ರೋಗಕ್ಕೆ ಜಾನುವಾರುಗಳು ಬಲಿ.. ಡಿಸಿ ಸ್ಪಷ್ಟನೆ…](https://karnataka1news.com/wp-content/uploads/2023/01/unnamed-file-3-860x487.jpg)