ವಿಜಯಪುರ: ಚಲಿಸುತ್ತಿದ್ದ ಬಸ್ ಕೆಳಗೆ ಬಿದ್ದು ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ವಿಜಯಪುರ ನಗರದ ಟಿಪ್ಪು ಸುಲ್ತಾನ್ ಸರ್ಕಲ್ನಲ್ಲಿ ಮಂಗಳವಾರ ನಡೆದಿದೆ. ಚಲಿಸುತ್ತಿದ್ದ ಬಸ್ ಕೆಳಗೆ ಮೊಬೈಲ್ ಎಸೆದು ಬಸ್ಸಿನ ಕೆಳಗೆ ಬಿದ್ದು ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇನ್ನು
ಬಸ್ ಕೆಳಗೆ ಬೀಳುವ ದೃಶ್ಯ ಪಕ್ಕದ ಅಂಗಡಿಯಲ್ಲಿರುವ ಸಿಸಿಟಿವಿಯಲ್ಲಿ ವಿಡಿಯೋ ಸೆರೆ ಆಗಿದೆ. ಯುವಕ ಹಾಸನ ಮೂಲದವನು ಎಂದು ಗುರುತಿಸಲಾಗಿದೆ. ಇನ್ನು ಯುವಕನ ಹೆಸರು, ವಿಳಾಸ ಪತ್ತೆ ಆಗಿಲ್ಲ. ಸ್ಥಳಕ್ಕೆ ಗಾಂಧಿಚೌಕ ಪೊಲೀಸರು ಭೇಟಿ ಪರಿಶೀಲನೆ ನಡೆಸಿದರು. ಗಾಂಧಿಚೌಕ್ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.
![](https://karnataka1news.com/wp-content/uploads/2023/12/IMG-20231227-WA0126-1-1024x1024.jpg)