ವಿಜಯಪುರ: ಗ್ರಾಮ ಪಂಚಾಯತಿ ಆವರಣದಲ್ಲಿ ನಿಲ್ಲಿಸಿದ ಜೆಸಿಬಿ ಕಳ್ಳತನ ಮಾಡಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿರುವ ಘಟನೆ ವಿಜಯಪುರದ ನಾಗಠಾಣ ಗ್ರಾಮದಲ್ಲಿ ನಡೆದಿದೆ. ವಿಜಯಕುಮಾರ್ ಬಿರಾದಾರ, ಭೀಮನಗೌಡ ಜುಮನಾಳ ಬಂಧಿತ ಆರೋಪಿಗಳು. ಇನ್ನು ಬಂಧಿತರು ನಾಗಠಾಣ ಗ್ರಾಮ ಪಂಚಾಯತಿ ಆವರಣದಲ್ಲಿ ನಿಲ್ಲಿಸಿದ 25 ಲಕ್ಷ ಮೌಲ್ಯದ ಜೆಸಿಬಿ ಕಳ್ಳತನ ಮಾಡಿದ್ದರು. ಆರೋಪಿಗಳಿಂದ ಜೆಸಿಬಿ ಹಾಗೂ ಬೈಕ್ನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಕುರಿತು ವಿಜಯಪುರ ಗ್ರಾಮೀಣ ಪೊಲೀಸ ಠಾಣೆಯಲ್ಲಿ ಕೇಸ್ ದಾಖಲಾಗಿದೆ.