ವಿಜಯಪುರ: ವಿಜಯಪುರ ಜಿಲ್ಲೆಯ ಮೂಲದ ವ್ಯಕ್ತಿಗೆ ಬೆಂಗಳೂರಿನಲ್ಲಿ JN1 ದೃಢಪಟ್ಟಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಬಸವರಾಜ ಹುಬ್ಬಳ್ಳಿ ಮಾಹಿತಿ ನೀಡಿದರು. ಬೆಂಗಳೂರಿಗೆ ಹೃದಯ ಶಸ್ತ್ರಚಿಕಿತ್ಸೆಗೆ ತೆರಳಿದ್ದ ವ್ಯಕ್ತಿಗೆ ಸೋಂಕು ತಗುಲಿದೆ. ಹೃದಯ ಶಸ್ತ್ರಚಿಕಿತ್ಸೆಗೆಂದು ಡಿಸೆಂಬರ್ 25 ರಂದು ಬೆಂಗಳೂರಿನ ಜಯದೇವ ಆಸ್ಪತ್ರೆಗೆ ತೆರಳಿದ್ದ ವ್ಯಕ್ತಿ ಹೋಗಿದ್ದಾರೆ. ವ್ಯಕ್ತಿಗೆ ಡಿಸೆಂಬರ್ 27 ರಂದು ಕೋವಿಡ್ ಟೆಸ್ಟ್, ಡಿಸೆಂಬರ್ 28ರಂದು ಸೋಂಕು ದೃಢಪಟ್ಟಿದೆ. ವಿಜಯಪುರ ಜಿಲ್ಲೆಯ ನಿಡಗುಂದಿ ಮೂಲದ 40ವರ್ಷದ ವ್ಯಕ್ತಿಗೆ ಕೋವಿಡ್ ಪಾಸಿಟಿವ್ ಬಂದಿದೆ. ಅದಕ್ಕಾಗಿ ಸೋಂಕು ದೃಢಪಟ್ಟ ವ್ಯಕ್ತಿಯ ಕುಟುಂಬಸ್ಥರ ಸ್ಯಾಂಪಲ್ ಸಂಗ್ರಹಿಸಿ ಸ್ಯಾಂಪಲ್ ಪರೀಕ್ಷೆಗಾಗಿ ರವಾನೆ ಮಾಡಲಾಗಿದೆ. ಕುಟುಂಬಸ್ಥರಿಗೆ ಹೋಂ ಐಸೋಲೇಷನ್ಗೆ ವ್ಯವಸ್ಥೆ ಮಾಡಲಾಗಿದೆ. ಜಿಲ್ಲೆಯಲ್ಲಿ ಕಟ್ಟುನಿಟ್ಟಿನ ಕ್ರಮಕ್ಕೆ ಜಿಲ್ಲಾಡಳಿತ, ಆರೋಗ್ಯ ಇಲಾಖೆ ಮುಂದಾಗಿದೆ. ಈವರೆಗೆ 314 ಜನರಿಗೆ ಕೋವಿಡ್ ಪರೀಕ್ಷೆ ಯಾವುದೇ ಪಾಸಿಟಿವ್ ದೃಢಪಟ್ಟಿಲ್ಲ. ಆದ್ರೆ, ಬೆಂಗಳೂರಿಗೆ ತೆರಳಿದ್ದ ವ್ಯಕ್ತಿಗೆ ಸೋಂಕು ಪತ್ತೆಯಾಗಿದೆ.