ವಿಜಯಪುರ: ಬ್ರಾಹ್ಮಣ ಸಮಾಜದ ವಿರುದ್ಧ
ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆ ಖಂಡನೀಯ. ಮಹಾರಾಷ್ಟ್ರದ ಮೂಲದ ಪೇಶ್ವಾಗಳು ಅಥವಾ ದೇಶಸ್ಥ ಬ್ರಾಹ್ಮಣರು ಎಂದು ಮಾಹಿತಿಯ ಇಲ್ಲದೆ ನಾಲಿಗೆ ಹರಿಬಿಟ್ಟಿದ್ದಾರೆ ಎಂದು ಬಿಜೆಪಿ ಜಿಲ್ಲಾ ಮಾಧ್ಯಮ ಸಂಚಾಲಕ ವಿಜಯ ಜೋಶಿ ಹೇಳಿದರು.
ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ ಅವರು, ಸಚಿವ ಪ್ರಹ್ಲಾದ ಜೋಶಿ ಯಾವುದೇ ಪೇಶ್ವೆಗಳಾಗಲಿ ಅಥವಾ ದೇಶಸ್ಥ ಬ್ರಾಹ್ಮಣರಲ್ಲ. ಈ ದೇಶದಲ್ಲಿ ಸ್ವತಂತ್ರ ಹೋರಾಟದಲ್ಲಿ ಬ್ರಾಹ್ಮಣರ ಕೊಡುಗೆ ಅಪಾರವಾಗಿದೆ. ಝಾನ್ಸಿ ರಾಣಿ ಲಕ್ಷ್ಮೀಬಾಯಿ, ಚಂದ್ರಶೇಖರ್ ಆಜಾದ್, ಮಂಗಲ್ ಪಾಂಡೆ, ಮದನ್ ಲಾಲ್ ಡಿಂಗ್ರ, ವೀರ ಸಾವರ್ಕರ್ ಹಾಗೂ ಇನ್ನೂ ಹಲವು ಬ್ರಾಹ್ಮಣರು ತಮ್ಮ ಜೀವನವನ್ನೇ ಅರ್ಪಣೆ ಮಾಡಿದ್ದಾರೆ. ಭಾರತೀಯ ಜನತಾ ಪಾರ್ಟಿಯ ಮುಂದಿನ ಮುಖ್ಯಮಂತ್ರಿಗಳ ಆಯ್ಕೆ ವಿಚಾರ ಬಿಜೆಪಿ ಪಕ್ಷಕ್ಕೆ ಬಿಟ್ಟಿದ್ದು, ಜಾತ್ಯಾತೀತ ಜನತಾದಳ ಎಂದು ಹೆಸರು ಇಟ್ಟುಕೊಂಡು ನಿಜವಾಗಲು ಜಾತಿ ರಾಜಕಾರಣ ಮಾಡುತ್ತಿರುವುದು ನೀವು. ಬ್ರಾಹ್ಮಣ ಸಮುದಾಯದ ಒಳಪಂಗಡಗಳ ನಡುವೆಯೇ ಮನಸ್ತಾಪ ಸೃಷ್ಟಿಸುವ ನಿಮ್ಮ ಉದ್ದೇಶ ಒಳ್ಳೆಯದಲ್ಲ. ನೀವು ಯಶಸ್ವಿಯಾಗುವುದು ಇಲ್ಲ. ನೀವು ಕೂಡಲೇ ಬ್ರಾಹ್ಮಣ ಸಮುದಾಯದ ಕ್ಷಮೆ ಕೇಳಬೇಕು ಎಂದರು.
ಎಚ್ಡಿಕೆ ವಿರುದ್ಧ ಜೋಶಿ ಕಿಡಿ
![](https://karnataka1news.com/wp-content/uploads/2023/02/IMG_20230203_095920.jpg)