ವಿಜಯಪುರ: ಬಿಜೆಪಿ ರಾಜ್ಯಾಧ್ಯಕ್ಷ ನಳಿನಕುಮಾರ ಕಟೀಲ್ ವಿರುದ್ಧ ಮಾಜಿ ಸಿಎಂ ಎಚ್ಡಿ ಕುಮಾರಸ್ವಾಮಿ ವಾಗ್ದಾಳಿ ಮಾಡಿದರು. ವಿಜಯಪುರ ನಗರದಲ್ಲಿ ಶುಕ್ರವಾರ ಮಾತನಾಡಿದ ಅವರು, ಬಿಜೆಪಿ ರಾಜ್ಯಾಧ್ಯಕ್ಷ ಚಪ್ಪಲಿ ಕಥೆ ಮೂಲಕ ಜೆಡಿಎಸ್ ಕಾಂಗ್ರೆಸ್ ಬಗ್ಗೆ ಟೀಕೆ ಹಿನ್ನೆಲೆ ಕಟೀಲ್ ದೇವೇಗೌಡರ ಧೂಳಿಗೂ ನೀವು ಸಮನಲ್ಲ. ಪ್ರಧಾನಿ ನರೇಂದ್ರ ಮೋದಿಗೆ ಹೋಗಿ ಕೇಳಿ ದೇವೇಗೌಡರು ಏನು ಎಂಬುದು ಗೊತ್ತಾಗುತ್ತದೆ ಎಂದು ಕಿಡಿಕಾರಿದರು.
ಅಲ್ಲದೇ, ಇದೇನಾ ನಿಮ್ಮ ಸಂಸ್ಕೃತಿ ನಾ..? ಕರ್ನಾಟಕದಿಂದ ನೀವು ನಿಮ್ಮ ಟೆಂಟ್ ಖಾಲಿ ಮಾಡಿಕೊಂಡು ಹೋಗುವ ಕಾಲ ಬಂದಿದೆ. ಧರ್ಮ ಧರ್ಮಗಳ ಮಧ್ಯೆ ಜಗಳ ಹೆಚ್ಚುವ ನಿಮ್ಮ ಆಟ ಇನ್ನು ನಡೆಯಲ್ಲ. ಉತ್ತರ ಕರ್ನಾಟಕದ ಜನರ ಜೊತೆ ಚೆಲ್ಲಾಟ ಆಡಿದ್ದೀರಿ. ನಿಮ್ಮ ಯೋಗ್ಯತೆ ನೀರಾವರಿ ಮಾಡಲಾಗದೆ ಹಣ ಲೂಟಿ ಹೊಡೆಯುತ್ತಿದ್ದೀರಿ ಎಂದು ಆರೋಪಿಸಿದರು. ಅಲ್ಲದೇ, ಇಲ್ಲಿ ನಿಮ್ಮ ಯತ್ನಾಳ, ನಿರಾಣಿ ಏನೆಲ್ಲಾ ಮಾತನಾಡುತ್ತಿದ್ದಾರೆ ಗಮನಿಸಿ. ಅದು ಚಪ್ಪಲಿಗಿಂತಲೂ ಕಡೆ ಎಂದು ಕಿಡಿಕಾರಿದರು. ದೇವೇಗೌಡರ ಬಗ್ಗೆ ಮತನಾಡುವ ನೈತಿಕತೆ ಇಲ್ಲ. ಎರಡೂ ಪಕ್ಷಗಳನ್ನು ಒದ್ದು ಹೊರಗೆ ಹಾಕುವುದಿಲ್ಲವೋ ಅಲ್ಲಿಯವರೆಗೆ ನಿಮ್ಮ ಬಾಳಿನ ಜೊತೆ ಚೆಲ್ಲಾಟ ಆಡುವುದು ಬಿಡಲ್ಲ ಎಂದರು.