ವಿಜಯಪುರ: ಚಾಲಕನ ನಿಯಂತ್ರಣ ತಪ್ಪಿ ಮಾರುತಿ ಕಾರು ಪಲ್ಟಿಯಾಗಿರುವ ಪರಿಣಾಮ ಒರ್ವ ಸ್ಥಳದಲ್ಲಿ ಅಸುನೀಗಿರುವ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲುಕಿನ ಢವಳಗಿ ಸಮೀಪ ಶುಕ್ರವಾರ ತಡರಾತ್ರಿ ನಡೆದಿದೆ.
ಚಾಲಕ ಸಾಗರ ಮುತ್ತಣ ಮನಪುರ (23) ಸಾವನ್ನಪ್ಪಿದ್ದಾನೆ. ಕಲಬುರಗಿಯಿಂದ ಕೊಪ್ಪಳ ಕಡೆಗೆ ಹೋಗುವ ವೇಳೆ ಈ ದುರ್ಘಟನೆ ಸಂಭವಿಸಿದೆ. ಅಲ್ಲದೇ, ಮೂರು ಜನ ಕಾರಿನಲ್ಲಿ ಪ್ರಯಾಣಿಕರಿದ್ದು, ಇಬ್ಬರು ಗಾಯಗೊಂಡಿದ್ದಾರೆ.
ಇಬ್ಬರಿಗೆ ಸ್ಥಳೀಯ ಆಸ್ಪತ್ರೆಗೆ ದಾಖಲಾಗಿ ಹೆಚ್ಚಿನ ಚಿಕಿತ್ಸೆಗೆ ಬಾಗಲಕೋಟೆ ಆಸ್ಪತ್ರೆ ರವಾನೆ ಮಾಡಲಾಗಿದೆ. ಮುದ್ದೇಬಿಹಾಳ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.