ಚಿಕ್ಕಮಗಳೂರು: ಕಾಡಾನೆ ತುಳಿದು ಪರಿಣಾಮ ಕಾರ್ಮಿಕ ಮಹಿಳೆ ಅಸುನೀಗಿರುವ ಘಟನೆ ಚಿಕ್ಕಮಗಳೂರುದ ಆಲ್ದೂರು ಸಮೀಪದ ಹೆಡದಾಳು ಗ್ರಾಮದಲ್ಲಿ ನಡೆದಿದೆ. ವೀಣಾ (45) ಮೃತ ಮಹಿಳೆ. ಕಳೆದ ಎರಡು ತಿಂಗಳಲ್ಲಿ ಎರಡನೇ ಬಲಿ ಇದಾಗಿದೆ. ಕಾಫಿ ತೋಟದ ಕೆಲಸಕ್ಕೆ ಹೋಗುವಾಗ ಆಲ್ದೂರು ಅರಣ್ಯ ವಲಯದಲ್ಲಿ ಈ ದುರ್ಘಟನೆ ಸಂಭವಿಸಿದೆ. ಇನ್ನು ಆನೆಗಳನ್ನ ಓಡಿಸುವಂತೆ ಸ್ಥಳೀಯರು ಪ್ರತಿಭಟನೆ ನಡೆಸಿ, ಆಗ್ರಹಿಸಿದ್ದಾರೆ. ಆಲ್ದೂರು ವಲಯದ ಅರಣ್ಯದಲ್ಲಿ ಏಳು ಕಾಡಾನೆಗಳು ಬೀಡು ಬಿಟ್ಟಿವೆ. ಅಲ್ಲೇ ಸುತ್ತಮುತ್ತಲಿನ ತೋಟದಲ್ಲಿ ಕಾಡಾನೆಗಳು ಓಡಾಟ ನಡೆಸಿವೆ. ಸ್ಥಳಕ್ಕೆ ಆಲ್ದೂರು ಅರಣ್ಯ ಅಧಿಕಾರಿಗಳ ಭೇಟಿ ನೀಡಿದ್ದಾರೆ.