ವಿಜಯಪುರ: ವಿಜಯಪುರ ತಾಲ್ಲೂಕಿನ ಅಲಿಯಾಬಾದ್ ಗ್ರಾಮದ ಕೈಗಾರಿಕಾ ಪ್ರದೇಶದ ಬ್ಲಾಕ್-2ರಲ್ಲಿರುವ ರಾಜಗುರು ಫುಡ್ಸ್ ಗೋದಾಮಿನಲ್ಲಿ ನಡೆದ ದುರಂತದಲ್ಲಿ ಸಾವಿಗೀಡಾದ 7 ಜನ ಕಾರ್ಮಿಕರ ಮೃತದೇಹಗಳು ಅವರ ಸ್ವಗ್ರಾಮಕ್ಕೆ ತಲುಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಮಾಹಿತಿ ತಿಳಿಸಿದ್ದಾರೆ. ಇನ್ನೂ ಮೃತ ಕಾರ್ಮಿಕರನ್ನೊಳಗೊಂಡಂತೆ ಗೋದಾಮಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲ ಕಾರ್ಮಿಕರ ಬಾಕಿ ವೇತನ ಪಾವತಿಗೆ ರಾಜಗುರು ಫುಡ್ಸ್ ಸಂಸ್ಥೆಯವರಿಗೆ ಡಿಸಿ ಭೂಬಾಲನ್ ಸೂಚಿಸಿದ್ದಾರೆ. ಅಲ್ಲದೇ, ಕಾರ್ಮಿಕರ ವಿನಂತಿ ಮೇರೆಗೆ ಅವಶ್ಯಕ ನೆರವು ಸಹ ಒದಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ತಿಳಿಸಿದ್ದಾರೆ.