ವಿಜಯಪುರ: ಪರೋಲ್ ಮೇಲೆ ಹೊರ ಬಂದಿದ್ದ ಜೀವಾವಧಿಗೆ ಗುರಿಯಾದ ಕೈದಿ ಪರಾರಿಯಾಗಿರುವ ಘಟನೆ
ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನ ಮುದ್ನಾಳ ಗ್ರಾಮದಲ್ಲಿ ನಡೆದಿದೆ.
ಜೀವಾವಧಿ ಶಿಕ್ಷೆಗೊಳಗಾಗಿದ್ದ ರಮೇಶ ಯಮನಪ್ಪ ಪರಪ್ಪಗೋಳ ಪರಾರಿಯಾಗಿದ್ದು, ಇತನ ಕುರಿತು ಮಾಹಿತಿ ನೀಡಿದ ಲಕ್ಷ ರೂಪಾಯಿ ಬಹುಮಾನ ನೀಡಲಾಗುತ್ತದೆ ಎಂದು ಎಸ್ಪಿ ಎಚ್ಡಿ ಆನಂದಕುಮಾರ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ತಿಳಿಸಿದ್ದಾರೆ. ಅಲ್ಲದೇ, ಕೇಂದ್ರ ಕಾರಾಗೃಹಕ್ಕೆ ಹೋಗಿ ಶರಣಾಗದೆ ತಲೆಮರೆಸಿಕೊಂಡಿದ್ದಾನೆ. ಈತನ ಸುಳಿವು ಪತ್ತೆಯಾದಲ್ಲಿ ಪೊಲೀಸರಿಗೆ ಮಾಹಿತಿ ನೀಡಬಹುದು ಎಂದು ಜಿಲ್ಲಾ ಎಸ್ಪಿ 9480804201 ಹಾಗೂ ಪೊಲೀಸ್ ಕಂಟ್ರೋಲ್ ರೂಂ: ದೂ: 0852- 250948 ಸಂಪರ್ಕಿಸಲು ತಿಳಿಸಲಾಗಿದೆ.