ವಿಜಯಪುರ: ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನದ ಜಾಥಾಕ್ಕೆ ವಿಜಯಪುರ ನಗರದ ಗಾಂಧಿಚೌಕ್ ಹತ್ತಿರದ ಸರ್ಕಾರಿ ಪಿಯು ಕಾಲೇಜ್ ಆವರಣದಲ್ಲಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಜಿಜಿ ಕುರುವತ್ತಿ ಜಾಥಾಕ್ಕೆ ಚಾಲನೆ ನೀಡಿದರು. ಜಿಲ್ಲಾಡಳಿತ, ಜಿಲ್ಲಾ ನ್ಯಾಯವಾದಿಗಳ ಸಂಘ ಸೇರಿದಂತೆ ವಿವಿಧ ಇಲಾಖೆಯಿಂದ ಕಾರ್ಯಕ್ರಮ ನಡೆಯಿತು. ಅಲ್ಲದೇ, ಕಾಲೇಜು ಆವರಣದಿಂದ ಗಾಂಧಿಚೌಕ್ ಮಾರ್ಗವಾಗಿ ಅಂಬೇಡ್ಕರ್ ಸರ್ಕಲ್ ಸೇರಿದಂತೆ ವಿವಿಧ ಕಡೆಗೆ ಬಾಲಕಾರ್ಮಿಕ ಪದ್ಧತಿಯ ಜಾಗೃತಿ ಮೂಡಿಸಿದರು. ಈ ವೇಳೆಯಲ್ಲಿ ಡಿಸಿ ವಿಜಯಮಹಾಂತೇಶ ದಾನಮ್ಮನವರ ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.