ವಿಜಯಪುರ: ನಗರದಲ್ಲಿರುವ ಐತಿಹಾಸಿಕ ಸ್ಮಾರಕಗಳ ಸ್ವಚ್ಚತೆ ನಮ್ಮೆಲ್ಲರ ಹೊಣೆಯಾಗಿದ್ದು, ಸ್ವಚ್ಛತೆಗೆ ಆದ್ಯತೆ ನೀಡುವ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸಲು ಈ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕರಾದ ಮಲ್ಲಿಕಾರ್ಜುನ ಭಜಂತ್ರಿ ಅವರು ಹೇಳಿದರು.
ಸೆ.27ರಂದು ವಿಶ್ವ ಪ್ರವಾಸೋದ್ಯಮ ದಿನಾಚರಣೆ ಅಂಗವಾಗಿ ಭಾನುವಾರ ಬೆಳಗ್ಗೆ 8 ಗಂಟೆಗೆ ನಗರದ ಐತಿಹಾಸಿಕ ಬೇಗಂ ತಲಾಬ್ ಕೆರೆ ಅಂಗಳದಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಜಿಲ್ಲಾಡಳಿತ ಪ್ರವಾಸೋದ್ಯಮ ಇಲಾಖೆ ಹಾಗೂ ವಿವಿಧ ಇಲಾಖೆಯ ನೇತೃತ್ವದಲ್ಲಿ ಸ್ವಚ್ಛತಾ ಕಾರ್ಯ ಕೈಗೊಳ್ಳಲಾಯಿತು. ತ್ಯಾಜ್ಯ ಒಂದೆಡೆ ಒಟ್ಟುಗೂಡಿಸಿ ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ, ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ, ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ ಹಾಗೂ ಬಿಎಲ್ ಡಿಇ ಡಾ.ಫ.ಗು.ಹಳಕಟ್ಟಿ ಇಂಜಿನೀಯರಿಂಗ್ ಹಾಗು ಟೆಕ್ನಾಲಾಜಿ ಕಾಲೆಜಿನ ಸಹಯೋಗದಲ್ಲಿ ವಿಶ್ವ ಪ್ರವಾಸೋದ್ಯಮ ದಿನಾಚರಣೆ ಅಂಗವಾಗಿ ಭಾನುವಾರ (ಸೆ.24) ನಗರದ ಐತಿಹಾಸಿಕ ಬೇಗಂ ತಲಾಬ್ ಕೆರೆಯಂಗಳದಲ್ಲಿ ಹಮ್ಮಿಕೊಂಡಿದ್ದ ಸ್ವಚ್ಛತಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಪ್ರವಾಸಿಗರು ಹಾಗೂ ಸಾರ್ವಜನಿಕರು ಸ್ಮಾರಕಗಳ ಸ್ವಚ್ಛತೆ ಕಾಪಾಡುವಂತೆ ಮನವಿ ಮಾಡಿದ ಅವರು,ಸೆ.27ರಂದು ವಿಶ್ವ ಪ್ರವಾಸೋದ್ಯಮ ದಿನಾಚರಣೆಯನ್ನು ಐತಿಹಾಸಿಕ ಬೇಗಂ ತಲಾಬ್ ಕೆರೆಯ ಆವರಣದಲ್ಲಿ ಕಾರ್ಯಕ್ರಮ ಆಯೋಜಿಸಲು ವ್ಯವಸ್ಥೆಗಾಗಿ ಜಿಲ್ಲಾಧಿಕಾರಿಗಳು ನಿರ್ದೇಶನ ನೀಡಿದ್ದಾರೆ ಎಂದು ಅವರು ಹೇಳಿದರು. ಬಿಎಲ್ ಡಿಯ ಎಲೆಕ್ಟ್ರಾನಿಕ್ ಹಾಗೂ ಕಮ್ಯುನಿಕೇಶನ್ ವಿಭಾಗದ ಅಂತಿಮ ವರ್ಷದ ವಿದ್ಯಾರ್ಥಿಗಳು,ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು, ಸಾರ್ವಜನಿಕರು ಈ ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಂಡು ಶ್ರಮದಾನ ಮಾಡಿದರು. ಈ ಸಂದರ್ಭದಲ್ಲಿ ಬಿಎಲ್ ಡಿಇ ಇಂಜಿನೀಯರಿಂಗ್ ಕಾಲೇಜಿನ ಡಾ.ಉಮೇಶ್ ದೀಕ್ಷಿತ, ಡಾ.ಜೆ.ಎಸ್.ಗೋನಾಳ, ಡಾ.ಜಿ.ಬಿ ಗೌರ್, ಡಾ.ಎಂ.ಎಂ.ಬನ್ನೂರ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ಅಮರೇಶ ದೊಡಮನಿ, ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ವ್ಯವಸ್ಥಾಪಕಾರ ಶ್ರೀಮತಿ ಜಗದೇವಿ ಕೆಂಬಾವಿ, ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ ವಿಜಯ, ಅಮೀನ್ ಹುಲ್ಲೂರ, ಪೀಟರ್ ಅಲೆಕ್ಸಾಂಡರ್ ಇಮೋ ಎಲೆಕ್ಟಿಕ್ ಮೊಬಿಲಿಟಿ ಮಹಮದ್ ಗೌಸ್,ಪ್ರವಾಸೋದ್ಯಮ ಇಲಾಖೆಯ ಅನಿಲ ಬಣಜಿಗೇರ, ತುಕಾರಾಮ ಪವಾರ್, ಜಗದೇವ್ ಗುಣಕಿ ಮಾರ್ಗದರ್ಶಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.
![](https://karnataka1news.com/wp-content/uploads/2023/09/IMG-20230924-WA0039-1024x682.jpg)