ವಿಜಯಪುರ: ಕಾಂಗ್ರೆಸ್ ಅಭ್ಯರ್ಥಿ ಅಬ್ದುಲ್ ಹಮ್ಮಿದ್ ಮುಶ್ರಿಫ್ ಲೆಕ್ಕಕ್ಕೆ ಇಲ್ಲ ಎಂದು ಜೆಡಿಎಸ್ ಅಭ್ಯರ್ಥಿ ಬಂದೇನವಾಜ ಮಹಾಬರಿ ಹೇಳಿದರು. ವಿಜಯಪುರ ನಗರದಲ್ಲಿ ಮಂಗಳವಾರ ಮಾಧ್ಯಮದ ಎದುರು ಮಾತನಾಡಿದ ಅವರು, ವಿಜಯಪುರ ನಗರ ಮತಕ್ಷೇತ್ರದಲ್ಲಿ ಬಿಜೆಪಿ ವರ್ಸ್ಸ್ ಜೆಡಿಎಸ್ ಇದೆ. ಆದ್ರೇ, ಕಾಂಗ್ರೆಸ್ ಆಟಕ್ಕೆ ಇಲ್ಲ ಎಂದು ಕಾಂಗ್ರೆಸ್ ಅಭ್ಯರ್ಥಿ ಮುಶ್ರಿಫ್ ವಿರುದ್ಧ ವಾಗ್ದಾಳಿ ಮಾಡಿದರು. ನಾನು ಹಲವು ವರ್ಷಗಳ ಕಾಲ ಜೆಡಿಎಸ್ ಪಕ್ಷಕ್ಕೆ ಕೆಲಸ ಮಾಡಿದ್ದೇನೆ. ಅದನ್ನು ಗುರುತಿಸಿ ನನಗೆ ಟಿಕೆಟ್ ನೀಡಿದ್ದಾರೆ. ಅಲ್ಲದೇ, ಶಾಸಕ ಯತ್ನಾಳ ಜಾತಿ ರಾಜಕೀಯ ಮಾಡುವುದು ಸರಿ ಅಲ್ಲ. ಅದಕ್ಕಾಗಿ ಈ ಸಲ ಜೆಡಿಎಸ್ ಪರ ಜನತೆಯ ಒಲವು ಇದೆ. ಇನ್ನೂ ಯತ್ನಾಳ ವಿರುದ್ಧ ಮಾತನಾಡಲು ಕಾಂಗ್ರೆಸ್ನಲ್ಲಿ ಸೂಕ್ತ ಅಭ್ಯರ್ಥಿಗಳು ಇಲ್ಲ. ಆದ್ರೇ, ನಾನು ಮಾತ್ರ ಯತ್ನಾಳಗೆ ಧೈರ್ಯದಿಂದ ಉತ್ತರ ನೀಡುತ್ತೇನೆ ಎಂದರು.