ವಿಜಯಪುರ: ಚಲಿಸುತ್ತಿದ್ದ ರೈಲಿಗೆ ಜಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ವಿಜಯಪುರ ನಗರದ ವಜ್ರ ಹನುಮಾನ್ ಗೇಟ್ ಬಳಿಯ ರೈಲ್ವೆ ಹಳಿಯಲ್ಲಿ ನಡೆದಿದೆ. ವಿಜಯಪುರ ನಗರ ನಿವಾಸಿ ಪ್ರಕಾಶ ಬಿರಾದಾರ ಆತ್ಮಹತ್ಯೆಗೆ ಶರಣಾದವರು. ಆದ್ರೇ, ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕೆ ರೈಲ್ವೆ ಪೊಲೀಸರು ಭೇಟಿ ಪರಿಶೀಲನೆ ನಡೆಸಿದರು. ವಿಜಯಪುರ ರೈಲ್ವೆ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.