ವಿಜಯಪುರ: ಅಂಗಡಿಯಲ್ಲಿ ಸ್ವಚ್ಛತೆಗೆ ಆದ್ಯತೆ ನೀಡದ ಅಂಗಡಿಗಳ ಮೇಲೆ ಮಹಾನಗರ ಪಾಲಿಕೆ ಅಧಿಕಾರಿಗಳು ದಾಳಿಗೈದಿರುವ ಘಟನೆ ವಿಜಯಪುರದ ನಗರದ ಲಾಲ್ ಬಹಾದ್ದೂರ್ ಶಾಸ್ತ್ರಿ ಮಾರ್ಕೆಟ್ನಲ್ಲಿ ನಡೆದಿದೆ. ಮಹಾನಗರ ಪಾಲಿಕೆ ಆಯುಕ್ತ ಮೆಕ್ಕಳಕಿ ನೇತೃತ್ವದಲ್ಲಿ ಅಂಗಡಿಯ ಮೇಲೆ ದಾಳಿಗೈದು ದಂಡ ವಿಧಿಸಿದ್ದಾರೆ. ಅಲ್ಲದೇ, ಅಂಗಡಿಯಲ್ಲಿ ಸ್ವಚ್ಛತೆಗೆ ಆದ್ಯತೆ ನೀಡದ ಅಂಗಡಿಗಳನ್ನು ಸೀಜ್ ಮಾಡಲಾಗಿದೆ. ಇನ್ನೂ ಮಾಲೀಕರಿಗೆ ಎಚ್ಚರಿಕೆ ನೀಡಿ ದಂಡ ವಿಧಿಸಲಾಗಿದೆ. ಅದಕ್ಕಾಗಿ ಅಂಗಡಿಯಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳಬೇಕು ಎಂದು ಆಯುಕ್ತ ಮೆಕ್ಕಳಕಿ ಹೇಳಿದರು.