ವಿಜಯಪುರ: ಆಟೋ ಹಾಗೂ ಬೈಕ್ಗೆ ಕಿಡಿಗೇಡಿಗಳು ಬೆಂಕಿ ಹಚ್ಚಿ ಪರಾರಿಯಾಗಿರುವ ಘಟನೆ ವಿಜಯಪುರದ ಕಾಳಿಕಾ ನಗರದಲ್ಲಿ ತಡರಾತ್ರಿ ನಡೆದಿದೆ. ರೇಣುಕಾ ಮೆಂಡೇಗಾರ ಎಂಬುವರಿಗೆ ಸೇರಿದ ಒಂದು ಆಟೋ, ಒಂದು ಬೈಕ್ ಭಸ್ಮವಾಗಿದೆ. ಇನ್ನೂ ಮನೆಯ ಎದುರು ನಿಲ್ಲಿಸಿದ ವಾಹನಗಳಿಗೆ ಬೆಂಕಿಯಿಟ್ಟು ಎಸ್ಕೇಪ್ ಆಗಿದೆ. ಘಟನೆಯಲ್ಲಿ ಲಕ್ಷಾಂತರ ಮೌಲ್ಯದ ವಾಹನಗಳು ಭಸ್ಮವಾಗಿವೆ. ಆದರ್ಶನಗರ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.