![](https://karnataka1news.com/wp-content/uploads/2023/11/IMG-20231123-WA0102.jpg)
ವಿಜಯಪುರ: ಭಾರತದಲ್ಲಿ ಹಲಾಲ್ ಸರ್ಟಿಫಿಕೇಟ್ ನೀಡುವ ಏಜೆನ್ಸಿಗಳನ್ನ ನಿಷೇಧಿಸಬೇಕು ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಕೇಂದ್ರ ಸಚಿವರಿಗೆ ಪತ್ರ ಬರೆದಿದ್ದಾರೆ. ಹಲಾಲ್ ಪ್ರಮಾಣಿಕರಿಸುವ ಏಜೆನ್ಸಿ ನಿಷೇಧಕ್ಕೆ ಶಾಸಕ ಯತ್ನಾಳ
ಕೇಂದ್ರದ ಗ್ರಾಹಕ ವ್ಯವಹಾರ, ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪಿಯೂಷ್ ಗೋಯಲ್ ಗೆ ಪತ್ರ ರವಾನಿಸಿದ್ದಾರೆ. ಭಾರತದಲ್ಲಿ ಹಲಾಲ್ ಸರ್ಟಿಫಿಕೇಟ್ ನೀಡುವ ಏಜೆನ್ಸಿಗಳನ್ನ ನಿಷೇಧಿಸುವಂತೆ ತುರ್ತು ಕ್ರಮಕ್ಕೆ ಮನವಿ ಮಾಡಿದರು. ಹಲಾಲ್ ಇಂಡಿಯಾ, ಜಮಿಯತ್ ಉಲೇಮಾ-ಐ-ಹಿಂದ್ ಹಲಾಲ್ ಟ್ರಸ್ಟ್, ಗ್ಲೋಬಲ್ ಇಸ್ಲಾಮಿಕ್ ಶರಿಯಾ, ಹಲಾಲ್ ಇಂಡಿಯಾ ಪ್ರೈವೇಟ್ ಲಿಮಿಟೆಡ್, ಹಲಾಲ್ ಸರ್ಟಿಫಿಕೇಟ್ ಸರ್ವಿಸ್ ಇಂಡಿಯಾ Pvt Ltd, ಜಮಿಯತ್ ಉಲಮಾ-ಇ-ಮಹಾರಾಷ್ಟ್ರ ನಿಷೇಧಕ್ಕೆ ಯತ್ನಾಳ್ ಒತ್ತಾಯಿಸಿದ್ದಾರೆ.
![](https://karnataka1news.com/wp-content/uploads/2023/11/IMG-20231123-WA0101.jpg)